Advertisement
ಸುದ್ದಿಗಳು

ಚತುಷ್ಪಥ ರಸ್ತೆ ನಿರ್ಮಾಣ ಸಂದರ್ಭ ಮರ ಕಡಿತ: ಗಿಡ ನೆಡುವಂತೆ ಒತ್ತಾಯ

Share

ಪುತ್ತೂರು: ಪುತ್ತೂರು ನಗರದ ಹಾರಾಡಿಯಿಂದ ಸೇಡಿಯಾಪು ತನಕ ಚತುಷ್ಪಥ ರಸ್ತೆ ನಿರ್ಮಾಣ ಸಂದರ್ಭದಲ್ಲಿ ರಸ್ತೆಗಳ ಇಕ್ಕೆಲಗಳ ಮರಗಳನ್ನು ಕಡಿದು ನಾಶಗೊಳಿಸಲಾಗಿರುವುದಕ್ಕೆ ಪರ್ಯಾಯವಾಗಿ ಒಂದೇ ಒಂದು ಮರಗಳನ್ನು ನೆಡದೆ ಇರುವುದು ಪರಿಸರಾಸಕ್ತರಾದ ನಮಗೆ ಹಾಗೂ ಸಾರ್ವಜನಿಕರಿಗೆ ಸಾಕಷ್ಟು ಆತಂಕ ಮತ್ತು ನೋವುಂಟು ಮಾಡಿದೆ. ಸದ್ರಿ ಚತುಷ್ಪಥಗೊಳಿಸುವ ಕೇಪುಳು ಎಂಬ ಪ್ರದೇಶದಿಂದ ಸೇಡಿಯಾಪು ಪ್ರದೇಶದವರೆಗೆ ಕಾಮಗಾರಿ ಆರಂಭಗೊಂಡಿದ್ದು, ಈ ಸಂದರ್ಭದಲ್ಲಿ ಸಹ ಸಾಕಷ್ಟು ಮರಗಳು ಹಾನಿಯಾಗುವ ಸಂಭವವಿದೆ. ಈ ಬಗ್ಗೆ ಅರಣ್ಯ ಇಲಾಖೆಯು ದಿವ್ಯ ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕ ವಲಯದಲ್ಲಿ ಸಂಶಯ ಮೂಡುವಂತಾಗಿದೆ. ಪರಿಸರ, ಪ್ರಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರಕಾರ ಮತ್ತು ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕಾಗಿದೆ ಹಾಗೂ ಈ ಬಗ್ಗೆ ಸಂಬಂಧಿಸಿದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪುತ್ತೂರು ಪ್ರಜಾ ಸೇವಾ ವೇದಿಕೆಯ ಮುರಳೀಧರ ರೈ ಮಠಂತಬೆಟ್ಟು ಆಗ್ರಹಿಸಿದರು.

ಅವರು ಇಂದು ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಈ ವಿಚಾರ ಪ್ರಸ್ತಾಪಿಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರೂಪೇಶ್ ರೈ ಅಲಿಮಾರ್ ,ವಿಷ್ಣು ಭಟ್ ಪಾದೆಕಲ್ಲು, ನ್ಯಾಯವಾದಿ ಭಾಸ್ಕರ ಗೌಡ ಕೋಡಿಂಬಾಳ, ಪ್ರಗತಿಪರ ಕೃಷಿಕ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು ಉಪಸ್ಥಿತರಿದ್ದರು. ಪತ್ರಿಕಾಗೋಷ್ಠಿಯ ಬಳಿಕ ಪುತ್ತೂರು ಸಹಾಯಕ ಆಯುಕ್ತರು, ಲೋಕೋಪಯೋಗಿ ಇಲಾಖೆ ಮತ್ತು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

7 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

12 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

19 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

20 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

20 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago