ಸುಳ್ಯ : ನೀರು ನಿಂತಲ್ಲೇ ನಿಂತರೆ ಅದು ಕಲ್ಮಶಗೊಳ್ಳುತ್ತದೆ. ಇದು ಬದುಕಿಗೂ ಅನ್ವಯಿಸುತ್ತದೆ. ಚಲನಶೀಲತೆ ಇರುವಲ್ಲಿ ಕ್ರಿಯಾಶೀಲತೆ ಹೆಚ್ಚುತ್ತದೆ. ಆ ಮೂಲಕ ಬದುಕಿಗೊಂದು ಅರ್ಥ ಬರುತ್ತದೆ. ಸಂಘಟನೆಗಳಲ್ಲಿ ಚಲನಶೀಲತೆ ಇದ್ದರೆ ಅದು ಗಟ್ಟಿಗೊಳ್ಳುತ್ತಾ ಹೋಗುತ್ತದೆ. ಎಂದು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಹೇಳೀದರು.
ಅವರು ಶ್ರೀಗುರುರಾಘವೇಂದ್ರ ಮಠದಲ್ಲಿ ಜರಗಿದ ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ರತ್ನಾವತಿ ಸೋಮಯಾಗಿ, ಅಜ್ಜಾವರ ಸರಸ್ವತಿ ಬೈಪಾಡಿತ್ತಾಯ ಮತ್ತು ಕಮಲಮ್ಮ ಕಾಯಂಬಾಡಿ ಇವರನ್ನು ಬೃಂದಾವನ ಸೇವಾ ಸಮಿತಿ ಟ್ರಸ್ಟಿ ಸುಮಾ ಸುಬ್ಬಾರಾವ್ ಸಮ್ಮಾನಿಸಿದರು. ಮುರಳೀಕೃಷ್ಣ ಕಣ್ಣರಾಯ ಸಭಾಧ್ಯಕ್ಷತೆ ವಹಿಸಿದ್ದರು.
ಪ್ರತಿಭಾ ಪುರಸ್ಕಾರ :
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದ ಕೃಪಾ ಅಮ್ಮಣ್ಣಾಯ ಹಾಗೂ ಸಿಇಟಿ ನೀಟ್ ಪರೀಕ್ಷೆಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ರ್ಯಾಂಕ್ ಪಡೆದ ಅಮಿಷಾ ಸೋಮಯಾಗಿ ಹಾಗೂ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಬೃಂದಾವನ ಸೇವಾಟ್ರಸ್ಟ್ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ, ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಮೂಡಿತ್ತಾಯ ಉಪಸ್ಥಿತರಿದ್ದರು.
ಕಾರ್ಯದರ್ಶಿ ರಾಮಕುಮಾರ್ ಹೆಬ್ಬಾರ್ ಸ್ವಾಗತಿಸಿ, ಮಹಿಳಾ ಘಟಕದ ಕಾರ್ಯದರ್ಶಿ ಸೌಮ್ಯ ಸೋಮಯಾಗಿ ವರದಿ ವಾಚಿಸಿದರು. ಯುವ ಘಟಕದ ಅಧ್ಯಕ್ಷ ಪ್ರಥಮ ಮೂಡಿತ್ತಾಯ ವಂದಿಸಿದರು. ಶರಣ್ಯ ಮತ್ತು ಅರ್ಜುನ್ ಆಚಾರ್ ನಿರೂಪಿಸಿದರು. ಪೂರ್ವಾಧ್ಯಕ್ಷ ಪ್ರಕಾಶ್ ಮೂಡಿತ್ತಾಯ ಅಭಿನಂದನಾ ಮಾತುಗಳನ್ನಾಡಿದರು.
ಮಹಾಸಭೆಯಲ್ಲಿ ಮುಂದಿನ ಸಾಲಿನ ಅಧ್ಯಕ್ಷರಾಗಿ ರಾಮಕೃಷ್ಣ ಮಾಳತ್ತಾಯ ಅಧಿಕಾರ ಸ್ವೀಕರಿಸಿದರು. ಪ್ರವೀಣಾ ಸೋಮಯಾಗಿ, ಸಂಜನಾ ಸೋಮಯಾಗಿ, ಪ್ರಣವ್ ಮೂಡಿತ್ತಾಯ, ರೂಪಾ ಕಣ್ಣರಾಯ, ಹೇಮ ವೈಲಾಯ ಸಹಕರಿಸಿದರು. ಬಳಿಕ ದುರ್ಗಾಪೂಜೆ ನಡೆಯಿತು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…