Advertisement
ಸುದ್ದಿಗಳು

ಚಲನಶೀಲತೆ ಇರುವಲ್ಲಿ ಕ್ರಿಯಾಶೀಲತೆ ವೃದ್ಧಿ : ಶಿವಳ್ಳಿ ಸಂಪನ್ನ ಮಹಾಸಭೆಯಲ್ಲಿ ಹರಿಣಿ ಪುತ್ತೂರಾಯ

Share

ಸುಳ್ಯ : ನೀರು ನಿಂತಲ್ಲೇ ನಿಂತರೆ ಅದು ಕಲ್ಮಶಗೊಳ್ಳುತ್ತದೆ. ಇದು ಬದುಕಿಗೂ ಅನ್ವಯಿಸುತ್ತದೆ. ಚಲನಶೀಲತೆ ಇರುವಲ್ಲಿ ಕ್ರಿಯಾಶೀಲತೆ ಹೆಚ್ಚುತ್ತದೆ. ಆ ಮೂಲಕ ಬದುಕಿಗೊಂದು ಅರ್ಥ ಬರುತ್ತದೆ. ಸಂಘಟನೆಗಳಲ್ಲಿ ಚಲನಶೀಲತೆ ಇದ್ದರೆ ಅದು ಗಟ್ಟಿಗೊಳ್ಳುತ್ತಾ ಹೋಗುತ್ತದೆ. ಎಂದು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಹೇಳೀದರು.
ಅವರು ಶ್ರೀಗುರುರಾಘವೇಂದ್ರ ಮಠದಲ್ಲಿ ಜರಗಿದ ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ರತ್ನಾವತಿ ಸೋಮಯಾಗಿ, ಅಜ್ಜಾವರ ಸರಸ್ವತಿ ಬೈಪಾಡಿತ್ತಾಯ ಮತ್ತು ಕಮಲಮ್ಮ ಕಾಯಂಬಾಡಿ ಇವರನ್ನು ಬೃಂದಾವನ ಸೇವಾ ಸಮಿತಿ ಟ್ರಸ್ಟಿ ಸುಮಾ ಸುಬ್ಬಾರಾವ್ ಸಮ್ಮಾನಿಸಿದರು. ಮುರಳೀಕೃಷ್ಣ ಕಣ್ಣರಾಯ ಸಭಾಧ್ಯಕ್ಷತೆ ವಹಿಸಿದ್ದರು.

ಪ್ರತಿಭಾ ಪುರಸ್ಕಾರ :

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದ ಕೃಪಾ ಅಮ್ಮಣ್ಣಾಯ ಹಾಗೂ ಸಿಇಟಿ ನೀಟ್ ಪರೀಕ್ಷೆಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ರ್ಯಾಂಕ್ ಪಡೆದ ಅಮಿಷಾ ಸೋಮಯಾಗಿ ಹಾಗೂ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಬೃಂದಾವನ ಸೇವಾಟ್ರಸ್ಟ್ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ, ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಮೂಡಿತ್ತಾಯ ಉಪಸ್ಥಿತರಿದ್ದರು.

ಕಾರ್ಯದರ್ಶಿ ರಾಮಕುಮಾರ್ ಹೆಬ್ಬಾರ್ ಸ್ವಾಗತಿಸಿ, ಮಹಿಳಾ ಘಟಕದ ಕಾರ್ಯದರ್ಶಿ ಸೌಮ್ಯ ಸೋಮಯಾಗಿ ವರದಿ ವಾಚಿಸಿದರು. ಯುವ ಘಟಕದ ಅಧ್ಯಕ್ಷ ಪ್ರಥಮ ಮೂಡಿತ್ತಾಯ ವಂದಿಸಿದರು. ಶರಣ್ಯ ಮತ್ತು ಅರ್ಜುನ್ ಆಚಾರ್ ನಿರೂಪಿಸಿದರು. ಪೂರ್ವಾಧ್ಯಕ್ಷ ಪ್ರಕಾಶ್ ಮೂಡಿತ್ತಾಯ ಅಭಿನಂದನಾ ಮಾತುಗಳನ್ನಾಡಿದರು.

ಮಹಾಸಭೆಯಲ್ಲಿ ಮುಂದಿನ ಸಾಲಿನ ಅಧ್ಯಕ್ಷರಾಗಿ ರಾಮಕೃಷ್ಣ ಮಾಳತ್ತಾಯ ಅಧಿಕಾರ ಸ್ವೀಕರಿಸಿದರು. ಪ್ರವೀಣಾ ಸೋಮಯಾಗಿ, ಸಂಜನಾ ಸೋಮಯಾಗಿ, ಪ್ರಣವ್ ಮೂಡಿತ್ತಾಯ, ರೂಪಾ ಕಣ್ಣರಾಯ, ಹೇಮ ವೈಲಾಯ ಸಹಕರಿಸಿದರು. ಬಳಿಕ ದುರ್ಗಾಪೂಜೆ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

9 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

20 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

20 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

21 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago