Advertisement
ಅಪರಾಧ

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ : ಇಬ್ಬರ ದಾರುಣ ಸಾವು

Share

ಬೆಳ್ತಂಗಡಿ: ಚಲಿಸುತ್ತಿರುವ ಕಾರಿನ ಮೇಲೆ ಹಠಾತ್ ಆಗಿ ಮರ ಬಿದ್ದು ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ಉಜಿರೆಯಲ್ಲಿ ನಡೆದಿದೆ.

ಯಾವುದೇ ಗಾಳಿಯೂ ಇರಲಿಲ್ಲ  ಮಳೆಯೂ ಇರಲಿಲ್ಲ. ಇದ್ದಕ್ಕಿದ್ದಂತೆ ನಡೆದ ಈ ಘಟನೆ ಜನರನ್ನು ತಲ್ಲಣಗೊಳಿಸಿದೆ.

ಧರ್ಮಸ್ಥಳದಿಂದ ಉಜಿರೆ ಕಡೆಗೆ ಕಾರಿನಲ್ಲಿ 4 ಜನ  ಪಯಣಿಸುತ್ತಿದ್ದರು. ಕಾರು ಸಿದ್ಧವನ ಎಂಬಲ್ಲಿನ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಮೇ ಫ್ಲವರ್  ಬೃಹತ್ ಮರವೊಂದು ಬುಡಸಮೇತ ಕುಸಿದು ಕಾರಿನ ಮೇಲೆ ಉರುಳಿದೆ. ಕಾರಿನ ಹಿಂಬದಿ ಕುಳಿತಿದ್ದ ಉಜಿರೆ ನಿನ್ನಿಕಲ್ಲು ನಿವಾಸಿ ಮೂಲತ ಪುದುವೆಟ್ಟು ಎಂಬಲ್ಲಿನ ಮುಕುಂದಅವರ ಪುತ್ರ ವಿಘ್ನೇಶ್ (21) ಸ್ಥಳದಲ್ಲೇ ಮೃತಪಟ್ಟರೆ , ಮಡಂತ್ಯಾರು ನಿವಾಸಿ ಕ್ಷಿತಿಜ್‍ಜೈನ್ (24) ಎಂಬುವರುಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಪುಂಜಾಲಕಟ್ಟೆ ಎಂಬಲ್ಲಿ ಹೋಗುತ್ತಿದ್ದಾಗ  ಮೃತಪಟ್ಟಿದ್ದಾರೆ.

 

ಸುಶಾಂತ ಹಾಗು ಹರ್ಷಿತ್ ಎಂಬ ಇನ್ನಿಬ್ಬರು ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಅಲ್ಲಿ  ಕಾರಿನ ಏರ್ ಬ್ಯಾಗ್ ತೆರೆದುಕೊಂಡದ್ದರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ಜನರೂ ಮಿತ್ರರಾಗಿದ್ದು ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

7 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago