ಬೆಳ್ತಂಗಡಿ: ಚಲಿಸುತ್ತಿರುವ ಕಾರಿನ ಮೇಲೆ ಹಠಾತ್ ಆಗಿ ಮರ ಬಿದ್ದು ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ಉಜಿರೆಯಲ್ಲಿ ನಡೆದಿದೆ.
ಯಾವುದೇ ಗಾಳಿಯೂ ಇರಲಿಲ್ಲ ಮಳೆಯೂ ಇರಲಿಲ್ಲ. ಇದ್ದಕ್ಕಿದ್ದಂತೆ ನಡೆದ ಈ ಘಟನೆ ಜನರನ್ನು ತಲ್ಲಣಗೊಳಿಸಿದೆ.
ಧರ್ಮಸ್ಥಳದಿಂದ ಉಜಿರೆ ಕಡೆಗೆ ಕಾರಿನಲ್ಲಿ 4 ಜನ ಪಯಣಿಸುತ್ತಿದ್ದರು. ಕಾರು ಸಿದ್ಧವನ ಎಂಬಲ್ಲಿನ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಮೇ ಫ್ಲವರ್ ಬೃಹತ್ ಮರವೊಂದು ಬುಡಸಮೇತ ಕುಸಿದು ಕಾರಿನ ಮೇಲೆ ಉರುಳಿದೆ. ಕಾರಿನ ಹಿಂಬದಿ ಕುಳಿತಿದ್ದ ಉಜಿರೆ ನಿನ್ನಿಕಲ್ಲು ನಿವಾಸಿ ಮೂಲತ ಪುದುವೆಟ್ಟು ಎಂಬಲ್ಲಿನ ಮುಕುಂದಅವರ ಪುತ್ರ ವಿಘ್ನೇಶ್ (21) ಸ್ಥಳದಲ್ಲೇ ಮೃತಪಟ್ಟರೆ , ಮಡಂತ್ಯಾರು ನಿವಾಸಿ ಕ್ಷಿತಿಜ್ಜೈನ್ (24) ಎಂಬುವರುಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಪುಂಜಾಲಕಟ್ಟೆ ಎಂಬಲ್ಲಿ ಹೋಗುತ್ತಿದ್ದಾಗ ಮೃತಪಟ್ಟಿದ್ದಾರೆ.
ಸುಶಾಂತ ಹಾಗು ಹರ್ಷಿತ್ ಎಂಬ ಇನ್ನಿಬ್ಬರು ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಅಲ್ಲಿ ಕಾರಿನ ಏರ್ ಬ್ಯಾಗ್ ತೆರೆದುಕೊಂಡದ್ದರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ಜನರೂ ಮಿತ್ರರಾಗಿದ್ದು ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…