ಬೆಳ್ತಂಗಡಿ: ಚಲಿಸುತ್ತಿರುವ ಕಾರಿನ ಮೇಲೆ ಹಠಾತ್ ಆಗಿ ಮರ ಬಿದ್ದು ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ಉಜಿರೆಯಲ್ಲಿ ನಡೆದಿದೆ.
ಯಾವುದೇ ಗಾಳಿಯೂ ಇರಲಿಲ್ಲ ಮಳೆಯೂ ಇರಲಿಲ್ಲ. ಇದ್ದಕ್ಕಿದ್ದಂತೆ ನಡೆದ ಈ ಘಟನೆ ಜನರನ್ನು ತಲ್ಲಣಗೊಳಿಸಿದೆ.
ಧರ್ಮಸ್ಥಳದಿಂದ ಉಜಿರೆ ಕಡೆಗೆ ಕಾರಿನಲ್ಲಿ 4 ಜನ ಪಯಣಿಸುತ್ತಿದ್ದರು. ಕಾರು ಸಿದ್ಧವನ ಎಂಬಲ್ಲಿನ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಮೇ ಫ್ಲವರ್ ಬೃಹತ್ ಮರವೊಂದು ಬುಡಸಮೇತ ಕುಸಿದು ಕಾರಿನ ಮೇಲೆ ಉರುಳಿದೆ. ಕಾರಿನ ಹಿಂಬದಿ ಕುಳಿತಿದ್ದ ಉಜಿರೆ ನಿನ್ನಿಕಲ್ಲು ನಿವಾಸಿ ಮೂಲತ ಪುದುವೆಟ್ಟು ಎಂಬಲ್ಲಿನ ಮುಕುಂದಅವರ ಪುತ್ರ ವಿಘ್ನೇಶ್ (21) ಸ್ಥಳದಲ್ಲೇ ಮೃತಪಟ್ಟರೆ , ಮಡಂತ್ಯಾರು ನಿವಾಸಿ ಕ್ಷಿತಿಜ್ಜೈನ್ (24) ಎಂಬುವರುಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಪುಂಜಾಲಕಟ್ಟೆ ಎಂಬಲ್ಲಿ ಹೋಗುತ್ತಿದ್ದಾಗ ಮೃತಪಟ್ಟಿದ್ದಾರೆ.
ಸುಶಾಂತ ಹಾಗು ಹರ್ಷಿತ್ ಎಂಬ ಇನ್ನಿಬ್ಬರು ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಅಲ್ಲಿ ಕಾರಿನ ಏರ್ ಬ್ಯಾಗ್ ತೆರೆದುಕೊಂಡದ್ದರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ಜನರೂ ಮಿತ್ರರಾಗಿದ್ದು ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…