ಬೆಳ್ತಂಗಡಿ: ಚಲಿಸುತ್ತಿರುವ ಕಾರಿನ ಮೇಲೆ ಹಠಾತ್ ಆಗಿ ಮರ ಬಿದ್ದು ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ಉಜಿರೆಯಲ್ಲಿ ನಡೆದಿದೆ.
ಯಾವುದೇ ಗಾಳಿಯೂ ಇರಲಿಲ್ಲ ಮಳೆಯೂ ಇರಲಿಲ್ಲ. ಇದ್ದಕ್ಕಿದ್ದಂತೆ ನಡೆದ ಈ ಘಟನೆ ಜನರನ್ನು ತಲ್ಲಣಗೊಳಿಸಿದೆ.
ಧರ್ಮಸ್ಥಳದಿಂದ ಉಜಿರೆ ಕಡೆಗೆ ಕಾರಿನಲ್ಲಿ 4 ಜನ ಪಯಣಿಸುತ್ತಿದ್ದರು. ಕಾರು ಸಿದ್ಧವನ ಎಂಬಲ್ಲಿನ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಮೇ ಫ್ಲವರ್ ಬೃಹತ್ ಮರವೊಂದು ಬುಡಸಮೇತ ಕುಸಿದು ಕಾರಿನ ಮೇಲೆ ಉರುಳಿದೆ. ಕಾರಿನ ಹಿಂಬದಿ ಕುಳಿತಿದ್ದ ಉಜಿರೆ ನಿನ್ನಿಕಲ್ಲು ನಿವಾಸಿ ಮೂಲತ ಪುದುವೆಟ್ಟು ಎಂಬಲ್ಲಿನ ಮುಕುಂದಅವರ ಪುತ್ರ ವಿಘ್ನೇಶ್ (21) ಸ್ಥಳದಲ್ಲೇ ಮೃತಪಟ್ಟರೆ , ಮಡಂತ್ಯಾರು ನಿವಾಸಿ ಕ್ಷಿತಿಜ್ಜೈನ್ (24) ಎಂಬುವರುಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಪುಂಜಾಲಕಟ್ಟೆ ಎಂಬಲ್ಲಿ ಹೋಗುತ್ತಿದ್ದಾಗ ಮೃತಪಟ್ಟಿದ್ದಾರೆ.
ಸುಶಾಂತ ಹಾಗು ಹರ್ಷಿತ್ ಎಂಬ ಇನ್ನಿಬ್ಬರು ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಅಲ್ಲಿ ಕಾರಿನ ಏರ್ ಬ್ಯಾಗ್ ತೆರೆದುಕೊಂಡದ್ದರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ಜನರೂ ಮಿತ್ರರಾಗಿದ್ದು ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…