ಬೆಳ್ತಂಗಡಿ: ಚಲಿಸುತ್ತಿರುವ ಕಾರಿನ ಮೇಲೆ ಹಠಾತ್ ಆಗಿ ಮರ ಬಿದ್ದು ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ಉಜಿರೆಯಲ್ಲಿ ನಡೆದಿದೆ.
ಯಾವುದೇ ಗಾಳಿಯೂ ಇರಲಿಲ್ಲ ಮಳೆಯೂ ಇರಲಿಲ್ಲ. ಇದ್ದಕ್ಕಿದ್ದಂತೆ ನಡೆದ ಈ ಘಟನೆ ಜನರನ್ನು ತಲ್ಲಣಗೊಳಿಸಿದೆ.
ಧರ್ಮಸ್ಥಳದಿಂದ ಉಜಿರೆ ಕಡೆಗೆ ಕಾರಿನಲ್ಲಿ 4 ಜನ ಪಯಣಿಸುತ್ತಿದ್ದರು. ಕಾರು ಸಿದ್ಧವನ ಎಂಬಲ್ಲಿನ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಮೇ ಫ್ಲವರ್ ಬೃಹತ್ ಮರವೊಂದು ಬುಡಸಮೇತ ಕುಸಿದು ಕಾರಿನ ಮೇಲೆ ಉರುಳಿದೆ. ಕಾರಿನ ಹಿಂಬದಿ ಕುಳಿತಿದ್ದ ಉಜಿರೆ ನಿನ್ನಿಕಲ್ಲು ನಿವಾಸಿ ಮೂಲತ ಪುದುವೆಟ್ಟು ಎಂಬಲ್ಲಿನ ಮುಕುಂದಅವರ ಪುತ್ರ ವಿಘ್ನೇಶ್ (21) ಸ್ಥಳದಲ್ಲೇ ಮೃತಪಟ್ಟರೆ , ಮಡಂತ್ಯಾರು ನಿವಾಸಿ ಕ್ಷಿತಿಜ್ಜೈನ್ (24) ಎಂಬುವರುಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಪುಂಜಾಲಕಟ್ಟೆ ಎಂಬಲ್ಲಿ ಹೋಗುತ್ತಿದ್ದಾಗ ಮೃತಪಟ್ಟಿದ್ದಾರೆ.
ಸುಶಾಂತ ಹಾಗು ಹರ್ಷಿತ್ ಎಂಬ ಇನ್ನಿಬ್ಬರು ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಅಲ್ಲಿ ಕಾರಿನ ಏರ್ ಬ್ಯಾಗ್ ತೆರೆದುಕೊಂಡದ್ದರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ಜನರೂ ಮಿತ್ರರಾಗಿದ್ದು ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…