ಕೊರೋನಾ ವೈರಸ್ ಇಡೀ ಪ್ರಪಂಚದಲ್ಲಿ ತಲೆ ಎತ್ತಿ ನಿಂತಿದೆ. ಕೊರೋನಾ ವೈರಸ್ ಇದೆ-ಇಲ್ಲ ಎಂಬ ಚರ್ಚೆ ಹೆಚ್ಚಾಗಿರುವ ನಡುವೆಯೇ ಚಳಿಗಾಲದಲ್ಲಿ ಮತ್ತೆ ಸಾಂಕ್ರಾಮಿಕ ರೋಗ ಬಾಧೆ ಕಾಡಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ವಿಜ್ಞಾನಿಗಳು ಈ ಪರಿಸ್ಥಿತಿಯನ್ನು ‘ಟ್ವೈನೆಡೆಮಿಕ್’ ಎಂದು ಹೆಸರಿಸಿದ್ದಾರೆ.
ಈಗಿನ ಮಾಹಿತಿ ಪ್ರಕಾರ ಋತುಮಾನಗಳು ಬದಲಾಗುವ ವೇಳೆ ಸಾಮಾನ್ಯವಾಗಿ ಶೀತ-ಜ್ವರ ಬಾಧೆ ಇರುತ್ತದೆ. ಇದು ಒಂದೆರಡು ದಿನಗಳ ಕಾಲ ಇದ್ದು ನಂತರ ವಾಸಿಯಾಗುತ್ತದೆ. ಇದು ಕೂಡಾ ವೈರಸ್ ಜ್ವರವಾಗಿದೆ. ಆದರೆ ಈಗಾಗಲೇ ಕೋವಿಡ್ ಇರುವ ಕಾರಣದಿಂದ ಋತುಮಾನ ಬದಲಾವಣೆಯ ಜ್ವರವೂ ಸಾಂಕ್ರಾಮಿಕವಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ರೋಗಿಗಳ ಸಂಖ್ಯೆ ಹೆಚ್ಚಾದರೆ, ಆಸ್ಪತ್ರೆಗಳ ಮುಂದೆ ದೊಡ್ಡ ಸಮಸ್ಯೆ ಉಂಟಾಗುತ್ತದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜನರು ಭಯಗೊಂಡರೆ ಕೋವಿಡ್ ಪರಿಸ್ಥಿತಿಯೇ ಬರಲಿದೆ. ಹೀಗಾಗಿ ಭಯ ನಿವಾರಣೆ ಹಾಗೂ ಆಸ್ಪತ್ರೆಗಳಲ್ಲಿ ದಟ್ಟಣೆ ನಿವಾರಣೆಗೆ ಕ್ರಮ ಅನಿವಾರ್ಯ ಎಂದೂ ತಜ್ಞರು ಎಚ್ಚರಿಸಿದ್ದಾರೆ. ಈಗಾಗಲೇ ಕೊರೋನಾ ಭಯ ಜಗತ್ತನ್ನು ಆವರಿಸಿದೆ. ಈ ಭಯದ ನಡುವೆ ಮುಂದಿನ ಋತುಮಾನ ಬದಲಾವಣೆಯ ಸಮಯದ ಜ್ವರ ಬಗ್ಗೆ ಧೈರ್ಯ ತುಂಬುವ ಕೆಲಸವಾಗಬೇಕಿದೆ. ಗ್ರಾಮೀಣ ಭಾಗದಲ್ಲೂ ವೈದ್ಯರು, ತಜ್ಞ ವೈದ್ಯರು ಲಭ್ಯವಾಗುವಂತೆ, ಸೂಕ್ತ ಔಷಧಿ ಲಭ್ಯವಾಗುವಂತೆ, ತಮ್ಮ ಕುಟುಂಬ ವೈದ್ಯರೇ ಲಭ್ಯವಾಗುವಂತೆ ವ್ಯವಸ್ಥೆ ಆಗಬೇಕಾಗಿದೆ. ಇದಕ್ಕಾಗಿ ಈಗಲೇ ತಯಾರಿ ನಡೆಯಬೇಕು ಎಂದು ವಿಜ್ಞಾನಿಗಳು ಸಲಹೆ ನೀಡಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…