ಕೊರೋನಾ ವೈರಸ್ ಇಡೀ ಪ್ರಪಂಚದಲ್ಲಿ ತಲೆ ಎತ್ತಿ ನಿಂತಿದೆ. ಕೊರೋನಾ ವೈರಸ್ ಇದೆ-ಇಲ್ಲ ಎಂಬ ಚರ್ಚೆ ಹೆಚ್ಚಾಗಿರುವ ನಡುವೆಯೇ ಚಳಿಗಾಲದಲ್ಲಿ ಮತ್ತೆ ಸಾಂಕ್ರಾಮಿಕ ರೋಗ ಬಾಧೆ ಕಾಡಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ವಿಜ್ಞಾನಿಗಳು ಈ ಪರಿಸ್ಥಿತಿಯನ್ನು ‘ಟ್ವೈನೆಡೆಮಿಕ್’ ಎಂದು ಹೆಸರಿಸಿದ್ದಾರೆ.
ಈಗಿನ ಮಾಹಿತಿ ಪ್ರಕಾರ ಋತುಮಾನಗಳು ಬದಲಾಗುವ ವೇಳೆ ಸಾಮಾನ್ಯವಾಗಿ ಶೀತ-ಜ್ವರ ಬಾಧೆ ಇರುತ್ತದೆ. ಇದು ಒಂದೆರಡು ದಿನಗಳ ಕಾಲ ಇದ್ದು ನಂತರ ವಾಸಿಯಾಗುತ್ತದೆ. ಇದು ಕೂಡಾ ವೈರಸ್ ಜ್ವರವಾಗಿದೆ. ಆದರೆ ಈಗಾಗಲೇ ಕೋವಿಡ್ ಇರುವ ಕಾರಣದಿಂದ ಋತುಮಾನ ಬದಲಾವಣೆಯ ಜ್ವರವೂ ಸಾಂಕ್ರಾಮಿಕವಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ರೋಗಿಗಳ ಸಂಖ್ಯೆ ಹೆಚ್ಚಾದರೆ, ಆಸ್ಪತ್ರೆಗಳ ಮುಂದೆ ದೊಡ್ಡ ಸಮಸ್ಯೆ ಉಂಟಾಗುತ್ತದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜನರು ಭಯಗೊಂಡರೆ ಕೋವಿಡ್ ಪರಿಸ್ಥಿತಿಯೇ ಬರಲಿದೆ. ಹೀಗಾಗಿ ಭಯ ನಿವಾರಣೆ ಹಾಗೂ ಆಸ್ಪತ್ರೆಗಳಲ್ಲಿ ದಟ್ಟಣೆ ನಿವಾರಣೆಗೆ ಕ್ರಮ ಅನಿವಾರ್ಯ ಎಂದೂ ತಜ್ಞರು ಎಚ್ಚರಿಸಿದ್ದಾರೆ. ಈಗಾಗಲೇ ಕೊರೋನಾ ಭಯ ಜಗತ್ತನ್ನು ಆವರಿಸಿದೆ. ಈ ಭಯದ ನಡುವೆ ಮುಂದಿನ ಋತುಮಾನ ಬದಲಾವಣೆಯ ಸಮಯದ ಜ್ವರ ಬಗ್ಗೆ ಧೈರ್ಯ ತುಂಬುವ ಕೆಲಸವಾಗಬೇಕಿದೆ. ಗ್ರಾಮೀಣ ಭಾಗದಲ್ಲೂ ವೈದ್ಯರು, ತಜ್ಞ ವೈದ್ಯರು ಲಭ್ಯವಾಗುವಂತೆ, ಸೂಕ್ತ ಔಷಧಿ ಲಭ್ಯವಾಗುವಂತೆ, ತಮ್ಮ ಕುಟುಂಬ ವೈದ್ಯರೇ ಲಭ್ಯವಾಗುವಂತೆ ವ್ಯವಸ್ಥೆ ಆಗಬೇಕಾಗಿದೆ. ಇದಕ್ಕಾಗಿ ಈಗಲೇ ತಯಾರಿ ನಡೆಯಬೇಕು ಎಂದು ವಿಜ್ಞಾನಿಗಳು ಸಲಹೆ ನೀಡಿದ್ದಾರೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…