ಕೊರೋನಾ ವೈರಸ್ ಇಡೀ ಪ್ರಪಂಚದಲ್ಲಿ ತಲೆ ಎತ್ತಿ ನಿಂತಿದೆ. ಕೊರೋನಾ ವೈರಸ್ ಇದೆ-ಇಲ್ಲ ಎಂಬ ಚರ್ಚೆ ಹೆಚ್ಚಾಗಿರುವ ನಡುವೆಯೇ ಚಳಿಗಾಲದಲ್ಲಿ ಮತ್ತೆ ಸಾಂಕ್ರಾಮಿಕ ರೋಗ ಬಾಧೆ ಕಾಡಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ವಿಜ್ಞಾನಿಗಳು ಈ ಪರಿಸ್ಥಿತಿಯನ್ನು ‘ಟ್ವೈನೆಡೆಮಿಕ್’ ಎಂದು ಹೆಸರಿಸಿದ್ದಾರೆ.
ಈಗಿನ ಮಾಹಿತಿ ಪ್ರಕಾರ ಋತುಮಾನಗಳು ಬದಲಾಗುವ ವೇಳೆ ಸಾಮಾನ್ಯವಾಗಿ ಶೀತ-ಜ್ವರ ಬಾಧೆ ಇರುತ್ತದೆ. ಇದು ಒಂದೆರಡು ದಿನಗಳ ಕಾಲ ಇದ್ದು ನಂತರ ವಾಸಿಯಾಗುತ್ತದೆ. ಇದು ಕೂಡಾ ವೈರಸ್ ಜ್ವರವಾಗಿದೆ. ಆದರೆ ಈಗಾಗಲೇ ಕೋವಿಡ್ ಇರುವ ಕಾರಣದಿಂದ ಋತುಮಾನ ಬದಲಾವಣೆಯ ಜ್ವರವೂ ಸಾಂಕ್ರಾಮಿಕವಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ರೋಗಿಗಳ ಸಂಖ್ಯೆ ಹೆಚ್ಚಾದರೆ, ಆಸ್ಪತ್ರೆಗಳ ಮುಂದೆ ದೊಡ್ಡ ಸಮಸ್ಯೆ ಉಂಟಾಗುತ್ತದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜನರು ಭಯಗೊಂಡರೆ ಕೋವಿಡ್ ಪರಿಸ್ಥಿತಿಯೇ ಬರಲಿದೆ. ಹೀಗಾಗಿ ಭಯ ನಿವಾರಣೆ ಹಾಗೂ ಆಸ್ಪತ್ರೆಗಳಲ್ಲಿ ದಟ್ಟಣೆ ನಿವಾರಣೆಗೆ ಕ್ರಮ ಅನಿವಾರ್ಯ ಎಂದೂ ತಜ್ಞರು ಎಚ್ಚರಿಸಿದ್ದಾರೆ. ಈಗಾಗಲೇ ಕೊರೋನಾ ಭಯ ಜಗತ್ತನ್ನು ಆವರಿಸಿದೆ. ಈ ಭಯದ ನಡುವೆ ಮುಂದಿನ ಋತುಮಾನ ಬದಲಾವಣೆಯ ಸಮಯದ ಜ್ವರ ಬಗ್ಗೆ ಧೈರ್ಯ ತುಂಬುವ ಕೆಲಸವಾಗಬೇಕಿದೆ. ಗ್ರಾಮೀಣ ಭಾಗದಲ್ಲೂ ವೈದ್ಯರು, ತಜ್ಞ ವೈದ್ಯರು ಲಭ್ಯವಾಗುವಂತೆ, ಸೂಕ್ತ ಔಷಧಿ ಲಭ್ಯವಾಗುವಂತೆ, ತಮ್ಮ ಕುಟುಂಬ ವೈದ್ಯರೇ ಲಭ್ಯವಾಗುವಂತೆ ವ್ಯವಸ್ಥೆ ಆಗಬೇಕಾಗಿದೆ. ಇದಕ್ಕಾಗಿ ಈಗಲೇ ತಯಾರಿ ನಡೆಯಬೇಕು ಎಂದು ವಿಜ್ಞಾನಿಗಳು ಸಲಹೆ ನೀಡಿದ್ದಾರೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…