ಕೊರೋನಾ ವೈರಸ್ ಇಡೀ ಪ್ರಪಂಚದಲ್ಲಿ ತಲೆ ಎತ್ತಿ ನಿಂತಿದೆ. ಕೊರೋನಾ ವೈರಸ್ ಇದೆ-ಇಲ್ಲ ಎಂಬ ಚರ್ಚೆ ಹೆಚ್ಚಾಗಿರುವ ನಡುವೆಯೇ ಚಳಿಗಾಲದಲ್ಲಿ ಮತ್ತೆ ಸಾಂಕ್ರಾಮಿಕ ರೋಗ ಬಾಧೆ ಕಾಡಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ವಿಜ್ಞಾನಿಗಳು ಈ ಪರಿಸ್ಥಿತಿಯನ್ನು ‘ಟ್ವೈನೆಡೆಮಿಕ್’ ಎಂದು ಹೆಸರಿಸಿದ್ದಾರೆ.
ಈಗಿನ ಮಾಹಿತಿ ಪ್ರಕಾರ ಋತುಮಾನಗಳು ಬದಲಾಗುವ ವೇಳೆ ಸಾಮಾನ್ಯವಾಗಿ ಶೀತ-ಜ್ವರ ಬಾಧೆ ಇರುತ್ತದೆ. ಇದು ಒಂದೆರಡು ದಿನಗಳ ಕಾಲ ಇದ್ದು ನಂತರ ವಾಸಿಯಾಗುತ್ತದೆ. ಇದು ಕೂಡಾ ವೈರಸ್ ಜ್ವರವಾಗಿದೆ. ಆದರೆ ಈಗಾಗಲೇ ಕೋವಿಡ್ ಇರುವ ಕಾರಣದಿಂದ ಋತುಮಾನ ಬದಲಾವಣೆಯ ಜ್ವರವೂ ಸಾಂಕ್ರಾಮಿಕವಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ರೋಗಿಗಳ ಸಂಖ್ಯೆ ಹೆಚ್ಚಾದರೆ, ಆಸ್ಪತ್ರೆಗಳ ಮುಂದೆ ದೊಡ್ಡ ಸಮಸ್ಯೆ ಉಂಟಾಗುತ್ತದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜನರು ಭಯಗೊಂಡರೆ ಕೋವಿಡ್ ಪರಿಸ್ಥಿತಿಯೇ ಬರಲಿದೆ. ಹೀಗಾಗಿ ಭಯ ನಿವಾರಣೆ ಹಾಗೂ ಆಸ್ಪತ್ರೆಗಳಲ್ಲಿ ದಟ್ಟಣೆ ನಿವಾರಣೆಗೆ ಕ್ರಮ ಅನಿವಾರ್ಯ ಎಂದೂ ತಜ್ಞರು ಎಚ್ಚರಿಸಿದ್ದಾರೆ. ಈಗಾಗಲೇ ಕೊರೋನಾ ಭಯ ಜಗತ್ತನ್ನು ಆವರಿಸಿದೆ. ಈ ಭಯದ ನಡುವೆ ಮುಂದಿನ ಋತುಮಾನ ಬದಲಾವಣೆಯ ಸಮಯದ ಜ್ವರ ಬಗ್ಗೆ ಧೈರ್ಯ ತುಂಬುವ ಕೆಲಸವಾಗಬೇಕಿದೆ. ಗ್ರಾಮೀಣ ಭಾಗದಲ್ಲೂ ವೈದ್ಯರು, ತಜ್ಞ ವೈದ್ಯರು ಲಭ್ಯವಾಗುವಂತೆ, ಸೂಕ್ತ ಔಷಧಿ ಲಭ್ಯವಾಗುವಂತೆ, ತಮ್ಮ ಕುಟುಂಬ ವೈದ್ಯರೇ ಲಭ್ಯವಾಗುವಂತೆ ವ್ಯವಸ್ಥೆ ಆಗಬೇಕಾಗಿದೆ. ಇದಕ್ಕಾಗಿ ಈಗಲೇ ತಯಾರಿ ನಡೆಯಬೇಕು ಎಂದು ವಿಜ್ಞಾನಿಗಳು ಸಲಹೆ ನೀಡಿದ್ದಾರೆ.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…