ಕೊರೋನಾ ವೈರಸ್ ಇಡೀ ಪ್ರಪಂಚದಲ್ಲಿ ತಲೆ ಎತ್ತಿ ನಿಂತಿದೆ. ಕೊರೋನಾ ವೈರಸ್ ಇದೆ-ಇಲ್ಲ ಎಂಬ ಚರ್ಚೆ ಹೆಚ್ಚಾಗಿರುವ ನಡುವೆಯೇ ಚಳಿಗಾಲದಲ್ಲಿ ಮತ್ತೆ ಸಾಂಕ್ರಾಮಿಕ ರೋಗ ಬಾಧೆ ಕಾಡಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ವಿಜ್ಞಾನಿಗಳು ಈ ಪರಿಸ್ಥಿತಿಯನ್ನು ‘ಟ್ವೈನೆಡೆಮಿಕ್’ ಎಂದು ಹೆಸರಿಸಿದ್ದಾರೆ.
ಈಗಿನ ಮಾಹಿತಿ ಪ್ರಕಾರ ಋತುಮಾನಗಳು ಬದಲಾಗುವ ವೇಳೆ ಸಾಮಾನ್ಯವಾಗಿ ಶೀತ-ಜ್ವರ ಬಾಧೆ ಇರುತ್ತದೆ. ಇದು ಒಂದೆರಡು ದಿನಗಳ ಕಾಲ ಇದ್ದು ನಂತರ ವಾಸಿಯಾಗುತ್ತದೆ. ಇದು ಕೂಡಾ ವೈರಸ್ ಜ್ವರವಾಗಿದೆ. ಆದರೆ ಈಗಾಗಲೇ ಕೋವಿಡ್ ಇರುವ ಕಾರಣದಿಂದ ಋತುಮಾನ ಬದಲಾವಣೆಯ ಜ್ವರವೂ ಸಾಂಕ್ರಾಮಿಕವಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ರೋಗಿಗಳ ಸಂಖ್ಯೆ ಹೆಚ್ಚಾದರೆ, ಆಸ್ಪತ್ರೆಗಳ ಮುಂದೆ ದೊಡ್ಡ ಸಮಸ್ಯೆ ಉಂಟಾಗುತ್ತದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜನರು ಭಯಗೊಂಡರೆ ಕೋವಿಡ್ ಪರಿಸ್ಥಿತಿಯೇ ಬರಲಿದೆ. ಹೀಗಾಗಿ ಭಯ ನಿವಾರಣೆ ಹಾಗೂ ಆಸ್ಪತ್ರೆಗಳಲ್ಲಿ ದಟ್ಟಣೆ ನಿವಾರಣೆಗೆ ಕ್ರಮ ಅನಿವಾರ್ಯ ಎಂದೂ ತಜ್ಞರು ಎಚ್ಚರಿಸಿದ್ದಾರೆ. ಈಗಾಗಲೇ ಕೊರೋನಾ ಭಯ ಜಗತ್ತನ್ನು ಆವರಿಸಿದೆ. ಈ ಭಯದ ನಡುವೆ ಮುಂದಿನ ಋತುಮಾನ ಬದಲಾವಣೆಯ ಸಮಯದ ಜ್ವರ ಬಗ್ಗೆ ಧೈರ್ಯ ತುಂಬುವ ಕೆಲಸವಾಗಬೇಕಿದೆ. ಗ್ರಾಮೀಣ ಭಾಗದಲ್ಲೂ ವೈದ್ಯರು, ತಜ್ಞ ವೈದ್ಯರು ಲಭ್ಯವಾಗುವಂತೆ, ಸೂಕ್ತ ಔಷಧಿ ಲಭ್ಯವಾಗುವಂತೆ, ತಮ್ಮ ಕುಟುಂಬ ವೈದ್ಯರೇ ಲಭ್ಯವಾಗುವಂತೆ ವ್ಯವಸ್ಥೆ ಆಗಬೇಕಾಗಿದೆ. ಇದಕ್ಕಾಗಿ ಈಗಲೇ ತಯಾರಿ ನಡೆಯಬೇಕು ಎಂದು ವಿಜ್ಞಾನಿಗಳು ಸಲಹೆ ನೀಡಿದ್ದಾರೆ.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…