ಸುಬ್ರಹ್ಮಣ್ಯ: ಚಾರಣದ ವೇಳೆ ಕಾಲು ಮುರಿತಕ್ಕೊಳಗಾಗಿದ್ದ ಯುವತಿಯೋರ್ವಳನ್ನು ಸುಬ್ರಹ್ಮಣ್ಯದ ಯುವಕರ ತಂಡ 7 ಕಿಲೋ ಮೀಟರ್ ದೂರ ಹೊತ್ತು ತಂಡ ಘಟನೆ ನಡೆದಿದೆ.
(ವಿಡಿಯೋ ಇದೆ)
ಬೆಂಗಳೂರು ಮೂಲದ 23 ಜನರ ತಂಡದ ಚಾರಣಕ್ಕೆ ಸೋಮವಾರ ತೆರಳಿತ್ತು. ಈ ಸಂದರ್ಭ ಯುವತಿಯೋರ್ವಳು ಕಾಲು ಜಾರಿ ಬಿದ್ದು ಕಾಲುನೋವಿನಿಂದ ಬಳಲಿದರು. ಆಕೆಯನ್ನು ಸುಬ್ರಹ್ಮಣ್ಯಕ್ಕೆ ಕರೆತರುವ ಬಗ್ಗೆ ಯುವಕರಲ್ಲಿ ಗೊಂದಲ ಉಂಟಾಯಿತು. ಯುವಕರ ತಂಡ ಅರಣ್ಯ ಇಲಾಖಾ ಸಿಬಂದಿಗಳಿಗೆ ಮಾಹಿತಿ ನೀಡಿದ ಬಳಿಕ ಅರಣ್ಯ ಅಧಿಕಾರಿಗಳು ಸುಬ್ರಹ್ಮಣ್ಯದ ಯುವಕರಿಗೆ ಮಾಹಿತಿ ನೀಡಿದ್ದಾರೆ.
ಗಿರಿಗದ್ದೆ ಬಳಿಯಿಂದ ಸುಬ್ರಹ್ಮಣ್ಯದ ಚಾಲಕ ಮಾಲಕರ ಸಂಘದ ಅಧ್ಯಕ್ಷರಾದ ಕುಸುಮಾಧರ, ಧರ್ಮಪಾಲ , ಕೃಷ್ಣ ಕುಮಾರ್ ಶೆಟ್ಟಿ, ಜೀವನ್ , ಸುಂದರ ಗೌಡ ಚೇರು ಮೊದಲಾದ ಯುವಕರ ತಂಡ ಪರ್ವತಕ್ಕೆ ತೆರಳಿ ಯುವತಿಯನ್ನು ಅಟ್ಟೆ ಮೇಲೆ ಮಲಗಿಸಿ ಸುಮಾರು ಏಳು ಕಿಲೋಮೀಟರ್ ಹೆಗಲಮೇಲೆ ಹೊತ್ತುಕೊಂಡು ಬಂದು ರಕ್ಷಣೆ ಮಾಡಿದ್ದಾರೆ.
ವಿಡಿಯೋ ಇಲ್ಲಿದೆ…..
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…