ಚಾರ್ಮಾಡಿ ಘಾಟಿಯಲ್ಲಿ ಒಂದು ತಿಂಗಳು ಸಂಚಾರ ನಿಷೇಧ

August 14, 2019
10:55 PM

ಮಂಗಳೂರು\ಸುಳ್ಯ: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರೆ 73 ರ ಚಾರ್ಮಾಡಿ ಘಾಟಿಯಲ್ಲಿ ಒಂದು ತಿಂಗಳ ಕಾಲ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

Advertisement

ಭಾರೀ ಮಳೆಯಲ್ಲಿ ಗುಡ್ಡ ಕುಸಿದು, ರಸ್ತೆ ಕೊಚ್ಚಿ ಹೋಗಿ ಹೆದ್ದಾರಿಗೆ ತೀವ್ರ ಹಾನಿ ಸಂಭವಿಸಿರುವ ಹಿನ್ನಲೆಯಲ್ಲಿ ದುರಸ್ಥಿಗಾಗಿ ಆ.15 ರಿಂದ ಸೆ.14 ರವರೆಗೆ 30 ದಿನಗಳ ಕಾಲ ಹೆದ್ದಾರಿಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಿ ದ.ಕ.ಜಿಲ್ಲಾಧಿಕಾರಿ ಎಸ್.ಶಶಿಕಾಂತ್ ಸೆಂಥಿಲ್ ಆದೇಶ ನೀಡಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ, ಮರ, ಕಲ್ಲುಗಳು ಬಿದ್ದಿರುವುದರಿಂದ ಕಳೆದ ಒಂದು ವಾರದಿಂದ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ಕಳೆದ ಕೆಲವು ದಿನಗಳಲ್ಲಿ ಘಾಟಿಯಲ್ಲಿ ಅಲ್ಲಲ್ಲಿ ಭಾರೀ ಪ್ರಮಾಣದ ಮಣ್ಣು ಕುಸಿತ ಉಂಟಾಗಿದೆ, ಬೃಹತ್ ಗಾತ್ರದ ಕಲ್ಲು, ಮರಗಳು ಹೆದ್ದಾರಿಯಲ್ಲಿ ಬಿದ್ದಿದೆ.ಅಲ್ಲದೆ ಅಲ್ಲಲ್ಲಿ ಹೆದ್ದಾರಿ ಕೊಚ್ಚಿ ಹೋಗಿ, ಬದಿ ಕುಸಿದು ಹೋಗಿ ಪ್ರಪಾತ ಸೃಷ್ಠಿಯಾಗಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಂಜಿನಿಯರ್ ಗಳ ಕೋರಿಕೆಯ ಮೆರೆಗೆ ರಸ್ತೆಯ ದುರಸ್ಥಿಗಾಗಿ ಒಂದು ತಿಂಗಳ ಕಾಲ ರಸ್ತೆಯಲ್ಲಿ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌
August 13, 2025
11:03 PM
by: ದ ರೂರಲ್ ಮಿರರ್.ಕಾಂ
ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ
August 13, 2025
9:13 PM
by: The Rural Mirror ಸುದ್ದಿಜಾಲ
15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ 
August 13, 2025
8:04 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?
August 13, 2025
2:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group