ಚಾರ್ಮಾಡಿ ಘಾಟಿಯಲ್ಲಿ ಒಂದು ತಿಂಗಳು ಸಂಚಾರ ನಿಷೇಧ

August 14, 2019
10:55 PM

ಮಂಗಳೂರು\ಸುಳ್ಯ: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರೆ 73 ರ ಚಾರ್ಮಾಡಿ ಘಾಟಿಯಲ್ಲಿ ಒಂದು ತಿಂಗಳ ಕಾಲ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

Advertisement
Advertisement

ಭಾರೀ ಮಳೆಯಲ್ಲಿ ಗುಡ್ಡ ಕುಸಿದು, ರಸ್ತೆ ಕೊಚ್ಚಿ ಹೋಗಿ ಹೆದ್ದಾರಿಗೆ ತೀವ್ರ ಹಾನಿ ಸಂಭವಿಸಿರುವ ಹಿನ್ನಲೆಯಲ್ಲಿ ದುರಸ್ಥಿಗಾಗಿ ಆ.15 ರಿಂದ ಸೆ.14 ರವರೆಗೆ 30 ದಿನಗಳ ಕಾಲ ಹೆದ್ದಾರಿಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಿ ದ.ಕ.ಜಿಲ್ಲಾಧಿಕಾರಿ ಎಸ್.ಶಶಿಕಾಂತ್ ಸೆಂಥಿಲ್ ಆದೇಶ ನೀಡಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ, ಮರ, ಕಲ್ಲುಗಳು ಬಿದ್ದಿರುವುದರಿಂದ ಕಳೆದ ಒಂದು ವಾರದಿಂದ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ಕಳೆದ ಕೆಲವು ದಿನಗಳಲ್ಲಿ ಘಾಟಿಯಲ್ಲಿ ಅಲ್ಲಲ್ಲಿ ಭಾರೀ ಪ್ರಮಾಣದ ಮಣ್ಣು ಕುಸಿತ ಉಂಟಾಗಿದೆ, ಬೃಹತ್ ಗಾತ್ರದ ಕಲ್ಲು, ಮರಗಳು ಹೆದ್ದಾರಿಯಲ್ಲಿ ಬಿದ್ದಿದೆ.ಅಲ್ಲದೆ ಅಲ್ಲಲ್ಲಿ ಹೆದ್ದಾರಿ ಕೊಚ್ಚಿ ಹೋಗಿ, ಬದಿ ಕುಸಿದು ಹೋಗಿ ಪ್ರಪಾತ ಸೃಷ್ಠಿಯಾಗಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಂಜಿನಿಯರ್ ಗಳ ಕೋರಿಕೆಯ ಮೆರೆಗೆ ರಸ್ತೆಯ ದುರಸ್ಥಿಗಾಗಿ ಒಂದು ತಿಂಗಳ ಕಾಲ ರಸ್ತೆಯಲ್ಲಿ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
June 12, 2025
3:28 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |
June 12, 2025
2:21 PM
by: ಸಾಯಿಶೇಖರ್ ಕರಿಕಳ
ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!
June 12, 2025
11:07 AM
by: ಮಹೇಶ್ ಪುಚ್ಚಪ್ಪಾಡಿ
ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ
June 12, 2025
7:06 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group