ಮಂಗಳೂರು\ಸುಳ್ಯ: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರೆ 73 ರ ಚಾರ್ಮಾಡಿ ಘಾಟಿಯಲ್ಲಿ ಒಂದು ತಿಂಗಳ ಕಾಲ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಭಾರೀ ಮಳೆಯಲ್ಲಿ ಗುಡ್ಡ ಕುಸಿದು, ರಸ್ತೆ ಕೊಚ್ಚಿ ಹೋಗಿ ಹೆದ್ದಾರಿಗೆ ತೀವ್ರ ಹಾನಿ ಸಂಭವಿಸಿರುವ ಹಿನ್ನಲೆಯಲ್ಲಿ ದುರಸ್ಥಿಗಾಗಿ ಆ.15 ರಿಂದ ಸೆ.14 ರವರೆಗೆ 30 ದಿನಗಳ ಕಾಲ ಹೆದ್ದಾರಿಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಿ ದ.ಕ.ಜಿಲ್ಲಾಧಿಕಾರಿ ಎಸ್.ಶಶಿಕಾಂತ್ ಸೆಂಥಿಲ್ ಆದೇಶ ನೀಡಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ, ಮರ, ಕಲ್ಲುಗಳು ಬಿದ್ದಿರುವುದರಿಂದ ಕಳೆದ ಒಂದು ವಾರದಿಂದ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ಕಳೆದ ಕೆಲವು ದಿನಗಳಲ್ಲಿ ಘಾಟಿಯಲ್ಲಿ ಅಲ್ಲಲ್ಲಿ ಭಾರೀ ಪ್ರಮಾಣದ ಮಣ್ಣು ಕುಸಿತ ಉಂಟಾಗಿದೆ, ಬೃಹತ್ ಗಾತ್ರದ ಕಲ್ಲು, ಮರಗಳು ಹೆದ್ದಾರಿಯಲ್ಲಿ ಬಿದ್ದಿದೆ.ಅಲ್ಲದೆ ಅಲ್ಲಲ್ಲಿ ಹೆದ್ದಾರಿ ಕೊಚ್ಚಿ ಹೋಗಿ, ಬದಿ ಕುಸಿದು ಹೋಗಿ ಪ್ರಪಾತ ಸೃಷ್ಠಿಯಾಗಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಂಜಿನಿಯರ್ ಗಳ ಕೋರಿಕೆಯ ಮೆರೆಗೆ ರಸ್ತೆಯ ದುರಸ್ಥಿಗಾಗಿ ಒಂದು ತಿಂಗಳ ಕಾಲ ರಸ್ತೆಯಲ್ಲಿ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…