ಮಂಗಳೂರು\ಸುಳ್ಯ: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರೆ 73 ರ ಚಾರ್ಮಾಡಿ ಘಾಟಿಯಲ್ಲಿ ಒಂದು ತಿಂಗಳ ಕಾಲ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಭಾರೀ ಮಳೆಯಲ್ಲಿ ಗುಡ್ಡ ಕುಸಿದು, ರಸ್ತೆ ಕೊಚ್ಚಿ ಹೋಗಿ ಹೆದ್ದಾರಿಗೆ ತೀವ್ರ ಹಾನಿ ಸಂಭವಿಸಿರುವ ಹಿನ್ನಲೆಯಲ್ಲಿ ದುರಸ್ಥಿಗಾಗಿ ಆ.15 ರಿಂದ ಸೆ.14 ರವರೆಗೆ 30 ದಿನಗಳ ಕಾಲ ಹೆದ್ದಾರಿಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಿ ದ.ಕ.ಜಿಲ್ಲಾಧಿಕಾರಿ ಎಸ್.ಶಶಿಕಾಂತ್ ಸೆಂಥಿಲ್ ಆದೇಶ ನೀಡಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ, ಮರ, ಕಲ್ಲುಗಳು ಬಿದ್ದಿರುವುದರಿಂದ ಕಳೆದ ಒಂದು ವಾರದಿಂದ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ಕಳೆದ ಕೆಲವು ದಿನಗಳಲ್ಲಿ ಘಾಟಿಯಲ್ಲಿ ಅಲ್ಲಲ್ಲಿ ಭಾರೀ ಪ್ರಮಾಣದ ಮಣ್ಣು ಕುಸಿತ ಉಂಟಾಗಿದೆ, ಬೃಹತ್ ಗಾತ್ರದ ಕಲ್ಲು, ಮರಗಳು ಹೆದ್ದಾರಿಯಲ್ಲಿ ಬಿದ್ದಿದೆ.ಅಲ್ಲದೆ ಅಲ್ಲಲ್ಲಿ ಹೆದ್ದಾರಿ ಕೊಚ್ಚಿ ಹೋಗಿ, ಬದಿ ಕುಸಿದು ಹೋಗಿ ಪ್ರಪಾತ ಸೃಷ್ಠಿಯಾಗಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಂಜಿನಿಯರ್ ಗಳ ಕೋರಿಕೆಯ ಮೆರೆಗೆ ರಸ್ತೆಯ ದುರಸ್ಥಿಗಾಗಿ ಒಂದು ತಿಂಗಳ ಕಾಲ ರಸ್ತೆಯಲ್ಲಿ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…