ಸುದ್ದಿಗಳು

ಚಾರ್ಮಾಡಿ ನದಿಯಲ್ಲಿ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಿಕೆ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ತಂಗಡಿ: ಬುಧವಾರ ಸಂಜೆ ಸುರಿದ ಮಳೆಗೆ ಚಾರ್ಮಾಡಿ ಹಾಗೂ ದಿಡುಪೆ ಪ್ರದೇಶದ ನದಿಗಳಲ್ಲಿ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಿಕೆಯಾಗಿ ಜನತೆ ಆತಂಕಕ್ಕೆ ಒಳಗಾದರು. ನೀರಿನ ರಭಸಕ್ಕೆ ಹಲವು ತೋಟಗಳಿಗೆ ನೀರು ನುಗ್ಗಿದರೆ , ಈಚೆಗೆ ನಿರ್ಮಾಣ ಮಾಡಿದ ರಸ್ತೆಗಳೂ ಕೊಚ್ಚಿ ಹೋದವು.

Advertisement

ಬುಧವಾರ ಸಂಜೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಸಾಧಾರಣ ಮಳೆ ಸುರಿಯಿತು. ಆದರೆ  ದಿಡುಪೆ ಸೇತುವೆಯ ಸಮೀಪ ಹಾಗೂ ಕುಕ್ಕಾವು ಸೇತುವೆಯ ಸಮೀಪ ನದಿ ನೀರು ಪ್ರವಾಹ ಮಾದರಿಯಲ್ಲಿ  ಉಕ್ಕಿ ಹರಿದಿದೆ. ಇದರ ಜೊತೆಗೆ ಅರಣ್ಯದ ಕಡೆಯಿಂದ ಬರುವ ಎಲ್ಲಾ ಹೊಳೆಗಳೂ ತುಂಬಿ ಹರಿದ ನೀರು ತೋಟಗಳಿಗೂ ನುಗ್ಗಿದೆ. ದಿಡುಪೆಯಲ್ಲಿ ಹಾಗೂ ಕುಕ್ಕಾವಿನಲ್ಲಿ ಕಳೆದ ಪ್ರವಾಹದ ಸಂದರ್ಭದಲ್ಲಿ ಹಾನಿಗೆ ಈಡಾಗಿದ್ದ ರಸ್ತೆಗಳನ್ನು  ಮಣ್ಣು ಹಾಕಿ ಮರು ನಿರ್ಮಿಸಲಾಗಿತ್ತು.  ಈ ರಸ್ತೆಗಳು  ಬಹುತೇಕ ನೀರಿಗೆ ಕೊಚ್ಚಿ ಹೋಗಿದೆ. ನದಿ ಕೊರತಕ್ಕೆ ಒಳಗಾಗಿದ್ದ ಪ್ರದೇಶಗಳಲ್ಲಿ ನದಿ ಬದಿಯಲ್ಲಿ ಹಾಕಲಾಗಿದ್ದ ತಡೆಗೋಡೆಗಳು ಮತ್ತೆ ಕೊಚ್ಚಿ ಹೋಗಿದೆ. ತೋಟಗಳಲ್ಲಿ ಮತ್ತೆ ಮರಳು ಹಾಗೂ ಮಣ್ಣು ತುಂಬಿಕೊಂಡಿದೆ.

ಕೊಳಂಬೆ ಪ್ರದೇಶದಲ್ಲಿ ತೋಟಗಳಿಗೆ ಹಾಗೂ ಗದ್ದೆಗಳಿಗೆ ನುಗ್ಗಿದ್ದ ಮರಳನ್ನು ಈಗಾಗಲೆ ತೆರವು ಗೊಳಿಸಲಾಗಿತ್ತು ಇದೀಗ ಪ್ರವಾಹದೊಂದಿಗೆ ಮತ್ತೆ ಮರಳು ಬಂದು ಸೇರಿಕೊಂಡಿದೆ. ನೀರು ಏರುತ್ತಿರುವುದನ್ನು ನೋಡಿ ಜನರು ಮತ್ತೆ ಪ್ರವಾಹದ ಭಯದಲ್ಲಿ ಮನೆಗಳಿಂದ ಹೊರಗೆ ಬಂದಿದ್ದರು. ಆದರೆ ನಿಧಾನವಾಗಿ ನದಿ ನೀರು ಇಳಿಯಲಾರಂಭಿಸಿದೆ. ರಾತ್ರಿಯ ವೇಳೆ ಈ ಪ್ರದೇಶಗಳಲ್ಲಿ ಮತ್ತೆ ಮಳೆ ಸುರಿಯಲಾರಂಭಿಸದ್ದು ಮತ್ತೆ ಜನರಲ್ಲಿ ಭಯ ಮೂಡಲು ಕಾರಣವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

2 hours ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

4 hours ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

18 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

18 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago