Advertisement
ಸುದ್ದಿಗಳು

ಚಾರ್ಮಾಡಿ ನದಿಯಲ್ಲಿ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಿಕೆ…!

Share

ಬೆಳ್ತಂಗಡಿ: ಬುಧವಾರ ಸಂಜೆ ಸುರಿದ ಮಳೆಗೆ ಚಾರ್ಮಾಡಿ ಹಾಗೂ ದಿಡುಪೆ ಪ್ರದೇಶದ ನದಿಗಳಲ್ಲಿ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಿಕೆಯಾಗಿ ಜನತೆ ಆತಂಕಕ್ಕೆ ಒಳಗಾದರು. ನೀರಿನ ರಭಸಕ್ಕೆ ಹಲವು ತೋಟಗಳಿಗೆ ನೀರು ನುಗ್ಗಿದರೆ , ಈಚೆಗೆ ನಿರ್ಮಾಣ ಮಾಡಿದ ರಸ್ತೆಗಳೂ ಕೊಚ್ಚಿ ಹೋದವು.

ಬುಧವಾರ ಸಂಜೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಸಾಧಾರಣ ಮಳೆ ಸುರಿಯಿತು. ಆದರೆ  ದಿಡುಪೆ ಸೇತುವೆಯ ಸಮೀಪ ಹಾಗೂ ಕುಕ್ಕಾವು ಸೇತುವೆಯ ಸಮೀಪ ನದಿ ನೀರು ಪ್ರವಾಹ ಮಾದರಿಯಲ್ಲಿ  ಉಕ್ಕಿ ಹರಿದಿದೆ. ಇದರ ಜೊತೆಗೆ ಅರಣ್ಯದ ಕಡೆಯಿಂದ ಬರುವ ಎಲ್ಲಾ ಹೊಳೆಗಳೂ ತುಂಬಿ ಹರಿದ ನೀರು ತೋಟಗಳಿಗೂ ನುಗ್ಗಿದೆ. ದಿಡುಪೆಯಲ್ಲಿ ಹಾಗೂ ಕುಕ್ಕಾವಿನಲ್ಲಿ ಕಳೆದ ಪ್ರವಾಹದ ಸಂದರ್ಭದಲ್ಲಿ ಹಾನಿಗೆ ಈಡಾಗಿದ್ದ ರಸ್ತೆಗಳನ್ನು  ಮಣ್ಣು ಹಾಕಿ ಮರು ನಿರ್ಮಿಸಲಾಗಿತ್ತು.  ಈ ರಸ್ತೆಗಳು  ಬಹುತೇಕ ನೀರಿಗೆ ಕೊಚ್ಚಿ ಹೋಗಿದೆ. ನದಿ ಕೊರತಕ್ಕೆ ಒಳಗಾಗಿದ್ದ ಪ್ರದೇಶಗಳಲ್ಲಿ ನದಿ ಬದಿಯಲ್ಲಿ ಹಾಕಲಾಗಿದ್ದ ತಡೆಗೋಡೆಗಳು ಮತ್ತೆ ಕೊಚ್ಚಿ ಹೋಗಿದೆ. ತೋಟಗಳಲ್ಲಿ ಮತ್ತೆ ಮರಳು ಹಾಗೂ ಮಣ್ಣು ತುಂಬಿಕೊಂಡಿದೆ.

ಕೊಳಂಬೆ ಪ್ರದೇಶದಲ್ಲಿ ತೋಟಗಳಿಗೆ ಹಾಗೂ ಗದ್ದೆಗಳಿಗೆ ನುಗ್ಗಿದ್ದ ಮರಳನ್ನು ಈಗಾಗಲೆ ತೆರವು ಗೊಳಿಸಲಾಗಿತ್ತು ಇದೀಗ ಪ್ರವಾಹದೊಂದಿಗೆ ಮತ್ತೆ ಮರಳು ಬಂದು ಸೇರಿಕೊಂಡಿದೆ. ನೀರು ಏರುತ್ತಿರುವುದನ್ನು ನೋಡಿ ಜನರು ಮತ್ತೆ ಪ್ರವಾಹದ ಭಯದಲ್ಲಿ ಮನೆಗಳಿಂದ ಹೊರಗೆ ಬಂದಿದ್ದರು. ಆದರೆ ನಿಧಾನವಾಗಿ ನದಿ ನೀರು ಇಳಿಯಲಾರಂಭಿಸಿದೆ. ರಾತ್ರಿಯ ವೇಳೆ ಈ ಪ್ರದೇಶಗಳಲ್ಲಿ ಮತ್ತೆ ಮಳೆ ಸುರಿಯಲಾರಂಭಿಸದ್ದು ಮತ್ತೆ ಜನರಲ್ಲಿ ಭಯ ಮೂಡಲು ಕಾರಣವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

30 minutes ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago