ಬೆಳ್ತಂಗಡಿ: ಬುಧವಾರ ಸಂಜೆ ಸುರಿದ ಮಳೆಗೆ ಚಾರ್ಮಾಡಿ ಹಾಗೂ ದಿಡುಪೆ ಪ್ರದೇಶದ ನದಿಗಳಲ್ಲಿ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಿಕೆಯಾಗಿ ಜನತೆ ಆತಂಕಕ್ಕೆ ಒಳಗಾದರು. ನೀರಿನ ರಭಸಕ್ಕೆ ಹಲವು ತೋಟಗಳಿಗೆ ನೀರು ನುಗ್ಗಿದರೆ , ಈಚೆಗೆ ನಿರ್ಮಾಣ ಮಾಡಿದ ರಸ್ತೆಗಳೂ ಕೊಚ್ಚಿ ಹೋದವು.
ಬುಧವಾರ ಸಂಜೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಸಾಧಾರಣ ಮಳೆ ಸುರಿಯಿತು. ಆದರೆ ದಿಡುಪೆ ಸೇತುವೆಯ ಸಮೀಪ ಹಾಗೂ ಕುಕ್ಕಾವು ಸೇತುವೆಯ ಸಮೀಪ ನದಿ ನೀರು ಪ್ರವಾಹ ಮಾದರಿಯಲ್ಲಿ ಉಕ್ಕಿ ಹರಿದಿದೆ. ಇದರ ಜೊತೆಗೆ ಅರಣ್ಯದ ಕಡೆಯಿಂದ ಬರುವ ಎಲ್ಲಾ ಹೊಳೆಗಳೂ ತುಂಬಿ ಹರಿದ ನೀರು ತೋಟಗಳಿಗೂ ನುಗ್ಗಿದೆ. ದಿಡುಪೆಯಲ್ಲಿ ಹಾಗೂ ಕುಕ್ಕಾವಿನಲ್ಲಿ ಕಳೆದ ಪ್ರವಾಹದ ಸಂದರ್ಭದಲ್ಲಿ ಹಾನಿಗೆ ಈಡಾಗಿದ್ದ ರಸ್ತೆಗಳನ್ನು ಮಣ್ಣು ಹಾಕಿ ಮರು ನಿರ್ಮಿಸಲಾಗಿತ್ತು. ಈ ರಸ್ತೆಗಳು ಬಹುತೇಕ ನೀರಿಗೆ ಕೊಚ್ಚಿ ಹೋಗಿದೆ. ನದಿ ಕೊರತಕ್ಕೆ ಒಳಗಾಗಿದ್ದ ಪ್ರದೇಶಗಳಲ್ಲಿ ನದಿ ಬದಿಯಲ್ಲಿ ಹಾಕಲಾಗಿದ್ದ ತಡೆಗೋಡೆಗಳು ಮತ್ತೆ ಕೊಚ್ಚಿ ಹೋಗಿದೆ. ತೋಟಗಳಲ್ಲಿ ಮತ್ತೆ ಮರಳು ಹಾಗೂ ಮಣ್ಣು ತುಂಬಿಕೊಂಡಿದೆ.
ಕೊಳಂಬೆ ಪ್ರದೇಶದಲ್ಲಿ ತೋಟಗಳಿಗೆ ಹಾಗೂ ಗದ್ದೆಗಳಿಗೆ ನುಗ್ಗಿದ್ದ ಮರಳನ್ನು ಈಗಾಗಲೆ ತೆರವು ಗೊಳಿಸಲಾಗಿತ್ತು ಇದೀಗ ಪ್ರವಾಹದೊಂದಿಗೆ ಮತ್ತೆ ಮರಳು ಬಂದು ಸೇರಿಕೊಂಡಿದೆ. ನೀರು ಏರುತ್ತಿರುವುದನ್ನು ನೋಡಿ ಜನರು ಮತ್ತೆ ಪ್ರವಾಹದ ಭಯದಲ್ಲಿ ಮನೆಗಳಿಂದ ಹೊರಗೆ ಬಂದಿದ್ದರು. ಆದರೆ ನಿಧಾನವಾಗಿ ನದಿ ನೀರು ಇಳಿಯಲಾರಂಭಿಸಿದೆ. ರಾತ್ರಿಯ ವೇಳೆ ಈ ಪ್ರದೇಶಗಳಲ್ಲಿ ಮತ್ತೆ ಮಳೆ ಸುರಿಯಲಾರಂಭಿಸದ್ದು ಮತ್ತೆ ಜನರಲ್ಲಿ ಭಯ ಮೂಡಲು ಕಾರಣವಾಗಿದೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…