ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರ್ಲಾನಿ, ಅನಾರು ಮತ್ತು ಹೊಸ್ಮಠಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.ಇದಕ್ಕೂ ಮುನ್ನ ಬೆಳ್ತಂಗಡಿಯಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಬಳಿಕ ಧರ್ಮಸ್ಥಕ್ಕೆ ಬಂದು ದೇವರ ದರ್ಶನ ಪಡೆದರು. ಧರ್ಮಸ್ಥಳದಲ್ಲಿ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಅವರನ್ನು ಸ್ವಾಗತಿಸಿದರು.ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ಧರಾಮಯ್ಯ ಪ್ರಧಾನಿಗಳು ರಾಜ್ಯದಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಪರಿಹಾರವನ್ನೂ ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದ ಸಿದ್ಧರಾಮಯ್ಯ, ಈಗ ಬಿಜೆಪಿ ಸರಕಾರ ರಚನೆಯ ಖುಷಿಯಲ್ಲಿಯೇ ಇದೆ. ಬಿ.ಜೆ.ಪಿಯವರು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಮಾಡುವುದಿಲ್ಲ. ಕುಣಿಯಲು ಬಾರದವರು ರಂಗಸ್ಥಳ ಸರಿ ಇಲ್ಲ ಅಂದ ಹಾಗೆ ಅವರು ಯಾವ ಕೆಲಸವನ್ನೂ ಸುಸೂತ್ರವಾಗಿ ಮಾಡುವುದಿಲ್ಲ ಎಂದು ಟೀಕಿಸಿದರು.
ಧರ್ಮಸ್ಥಳದ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಭೋಜನ ಸ್ವೀಕರಿಸಿ ಮಂಗಳೂರಿಗೆ ಪ್ರಯಾಣ ಮುಂದುವರಿಸಿದರು. ಮಾಜಿ ಸಚಿವ ಯು.ಟಿ.ಖಾದರ್, ಅಭಯಚಂದ್ರಜೈನ್ , .ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ಕುಮಾರ್ , ಪ್ರಮುಖರಾದ ವಸಂತ ಬಂಗೇರ ಮೊದಲಾದವರು ಇದ್ದರು.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…