ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರ್ಲಾನಿ, ಅನಾರು ಮತ್ತು ಹೊಸ್ಮಠಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.ಇದಕ್ಕೂ ಮುನ್ನ ಬೆಳ್ತಂಗಡಿಯಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಬಳಿಕ ಧರ್ಮಸ್ಥಕ್ಕೆ ಬಂದು ದೇವರ ದರ್ಶನ ಪಡೆದರು. ಧರ್ಮಸ್ಥಳದಲ್ಲಿ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಅವರನ್ನು ಸ್ವಾಗತಿಸಿದರು.ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ಧರಾಮಯ್ಯ ಪ್ರಧಾನಿಗಳು ರಾಜ್ಯದಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಪರಿಹಾರವನ್ನೂ ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದ ಸಿದ್ಧರಾಮಯ್ಯ, ಈಗ ಬಿಜೆಪಿ ಸರಕಾರ ರಚನೆಯ ಖುಷಿಯಲ್ಲಿಯೇ ಇದೆ. ಬಿ.ಜೆ.ಪಿಯವರು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಮಾಡುವುದಿಲ್ಲ. ಕುಣಿಯಲು ಬಾರದವರು ರಂಗಸ್ಥಳ ಸರಿ ಇಲ್ಲ ಅಂದ ಹಾಗೆ ಅವರು ಯಾವ ಕೆಲಸವನ್ನೂ ಸುಸೂತ್ರವಾಗಿ ಮಾಡುವುದಿಲ್ಲ ಎಂದು ಟೀಕಿಸಿದರು.
ಧರ್ಮಸ್ಥಳದ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಭೋಜನ ಸ್ವೀಕರಿಸಿ ಮಂಗಳೂರಿಗೆ ಪ್ರಯಾಣ ಮುಂದುವರಿಸಿದರು. ಮಾಜಿ ಸಚಿವ ಯು.ಟಿ.ಖಾದರ್, ಅಭಯಚಂದ್ರಜೈನ್ , .ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ಕುಮಾರ್ , ಪ್ರಮುಖರಾದ ವಸಂತ ಬಂಗೇರ ಮೊದಲಾದವರು ಇದ್ದರು.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…