ಕಾಣಿಯೂರು: ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಮುದುವದಲ್ಲಿರುವ ಸಂಘದ ಕೇಂದ್ರ ಕಚೇರಿ ಪರಿಸರದಲ್ಲಿ ಗೇರು ಮತ್ತು ವಿವಿಧ ತಳಿಯ ಸಸಿಗಳ ತೋಟ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ದ.ಕ.ಹಾಲು ಒಕ್ಕೂಟದ ನಿರ್ದೇಶಕರಾದ ನಾರಾಯಣ ಪ್ರಕಾಶ್ ಮತ್ತು ಎಸ್.ಬಿ.ಜಯರಾಮ ರೈ ಬಳಜ್ಜ , ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಮಾಧವಿ ಕೋಡಂದೂರು,ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ ಅವರು ತೋಟ ನಿರ್ಮಾಣಕ್ಕೆ ಚಾಲನೆ ನೀಡಿ ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಯೋಜನೆಗೆ ಶ್ಲಾಘನೆ ವ್ಯಕ್ತಪಡಿಸಿದರು.
ಈ ಸಂದರ್ಭ ಪುತ್ತೂರು ಭೂ ಅಭಿವೃದ್ದಿ ಬ್ಯಾಂಕ್ನ ನಿರ್ದೇಶಕ,ಗ್ರಾ.ಪಂ.ಸದಸ್ಯ ಗಣೇಶ್ ಉದನಡ್ಕ, ದೇವಯ್ಯ ಖಂಡಿಗ,ಉದ್ಯಮಿ ಪ್ರದೀಪ್ ಬೊಬ್ಬೆಕೇರಿ, ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ರಾಮಕೃಷ್ಣ ಭಟ್,ಕಾಣಿಯೂರು ಗ್ರಾ.ಪಂ.ಸದಸ್ಯ ದಿನೇಶ್ ಘೌಡ ಇಡ್ಯಡ್ಕ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಹರೀಶ್ ಅಂಬುಲ,ಕಮಲಾ ಮುದುವ,ರತ್ನಾ ಮುದುವ,ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಇಡ್ಯಡ್ಕ,ನಿರ್ದೇಶಕರಾದ ಕಾಂತ ಪರವ,ಮಾಧವ ಎಣ್ಮೂರು,ಜಯಂತ್,ಸದಾನಂದ,ಪರಮೇಶ್ವರ ,ಉಮೇಶ್,ರಾಜೀವಿ,ಸುಂದರ ಕೀಲೆ, ಹಾಗೂ ವಿಶ್ವನಾಥ ಖಂಡಿಗ, ನಿಶ್ಚಿತ್ ,ತಿಲಕ್,ಪ್ರಶಾಂತ್,ತೇಜಸ್ವಿನಿ, ಹರಿಣಿ ಮೊದಲಾದವರು ಉಪಸ್ಥಿತರಿದ್ದರು.
ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ ಸ್ವಾಗತಿಸಿ, ಕಾರ್ಯದರ್ಶಿ ದಮಯಂತಿ ಮುದುವ ವಂದಿಸಿದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…