ಮಂಗಳೂರು: ಉಸಿರಾಟದ ಸಮಸ್ಯೆಯಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಇಂದು ಬೆಳಗ್ಗೆ 10 ಗಂಟೆಗೆ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.
ಕಫ ಹಾಗೂ ಉಸಿರಾಟದ ಸಮಸ್ಯೆಯಿಂದ ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದರು. ಶ್ರೀಗಳ ಆರೋಗ್ಯ ಸ್ಥಿತಿ ವಿಚಾರಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಗಳ ಆಪ್ತ ಕಾರ್ಯದರ್ಶಿಗೆ ಕರೆ ಮಾಡಿದ್ದರು. ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಇಂದು ಮಣಿಪಾಲದ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸುವ ಸಾಧ್ಯತೆಯಿದೆ.
ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಪೇಜಾವರ ಮಠದ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಶ್ರೀಗಳ ಸ್ಥಿತಿ ಚಿಂತಾಜನಕವಾಗಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನದವರೆಗೆ ಶ್ರೀಗಳ ದೇಹದಿಂದ ಮೂತ್ರ ವಿಸರ್ಜನೆಯಾಗಿರುವುದನ್ನು ನೋಡಿದ್ದೇನೆ. ಆದಷ್ಟು ಬೇಗ ಅವರು ಗುಣಮುಖರಾಗುತ್ತಾರೆ. ಯಾರೂ ಕೂಡ ಭೇಟಿ ಮಾಡಿ ತೊಂದರೆ ಕೊಡಬೇಡಿ. ಭಕ್ತರ ಭೇಟಿಯಿಂದ ಶ್ರೀಗಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ದೂರದಿಂದಲೇ ಅವರಿಗಾಗಿ ಪ್ರಾರ್ಥನೆ ಮಾಡಿ. ಶ್ರೀಗಳು ಗುಣಮುಖರಾಗುವಂತೆ ಪೂಜೆ ಪುನಸ್ಕಾರಗಳು ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…