ಬಾಳುಗೋಡು: ಎರಡು ದಿನಗಳ ಹಿಂದಷ್ಟೇ ಚಿಕಿತ್ಸೆಗೆ ಒಳಗಾಗಿದ್ದ ಕಾಡಾನೆಗೆ ಮತ್ತೆ ಸಂಕಟಕ್ಕೆ ಒಳಗಾಗಿದೆ. ಕಾಡಿನಲ್ಲಿದ್ದ ಕಾಡಾನೆಗೆ ಇನ್ನೊಂದು ಆನೆ ತಿವಿದು ಮತ್ತೆ ನೋವಿಗೆ ಒಳಗಾಗಿದೆ. ನೋವಿನಿಂದ ಇದ್ದ ಆನೆಗೆ ಮತ್ತೆ ಸಂಕಟ ಎದುರಾಗಿದೆ.
ಬಾಳುಗೋಡು ಮೀಸಲು ಅರಣ್ಯದಲ್ಲಿ ಮುಂಗಾಲಿಗೆ ಗಾಯಗಳಾಗಿದ್ದ ಸ್ಥಿತಿಯಲ್ಲಿದ್ದ ಆನೆಗೆ ಚಿಕಿತ್ಸೆ ನೀಡಿ ಬಿಡಲಾಗಿತ್ತು. ಅರಣ್ಯ ಇಲಾಖೆಯ ಸಿಬಂದಿಗಳು ನಂತರ ಆನೆಯ ಚಲನವಲನ ಗಮನಿಸುತ್ತಿದ್ದರು. ಇದೀಗ ಭಾನುವಾರ ಮತ್ತೆ ಇನ್ನೊಂದು ಕಾಡಾನೆ ತಿವಿದು ಗಾಯಗೊಂಡಿರುವ ಬಗ್ಗೆ ಅರಣ್ಯ ಇಲಾಖಾ ಸಿಬಂದಿಗಳು ಮಾಹಿತಿ ನೀಡಿದ್ದಾರೆ.
ಈ ವೇಳೆ ಸ್ಥಳೀಯರು ಆನೆಯನ್ನು ಶಬ್ಧ ಮಾಡಿ ಓಡಿಸುವ ಪ್ರಯತ್ನ ನಡೆಸಿ ಗಾಯಗೊಂಡ ಆನೆಯನ್ನು ಧಾಳಿಯಿಂದ ರಕ್ಷಿಸುವ ಪ್ರಯತ್ನಿಸಿದರು. ಈ ವೇಳೆ ಆನೆ ಕಾಡಿನ ಆನೆ ಸ್ಥಳೀ ಯರನ್ನು ಬೆನ್ನಟ್ಟಿದೆ. ಗಾಯಗೊಂಡಿದ್ದ ಆನೆಯ ದೇಹದಿಂದ ರಕ್ತ ಸೋರಿಕೆಯಾಗುತ್ತಿತ್ತು ಮತ್ತು ನೆಲದಲ್ಲಿ ಭಾರಿ ಪ್ರಮಾಣದಲ್ಲಿ ರಕ್ತ ಚೆಲ್ಲಿತ್ತು. ಧಾಳಿಯಿಂದ ಬೆದರಿದ ಆನೆ ಕಾಡಿನತ್ತ ತೆರಳಲು ಹಿಂದೇಟು ಹಾಕುತ್ತಿದೆ ಎಂದು ಸ್ಥಳೀಯರು ಹೇಳುತ್ತಾರೆ. ಗಾಯಗೊಂಡ ಆನೆ ಮೇಲೆ ಸ್ಥಳೀಯರು ಪ್ರೀತಿ ತೋರುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಆನೆಗೆ ಆಹಾರದ ಕೊರತೆ ಆಗದಂತೆ ಬೈನೆಮರದ ಮೇವನ್ನು ಸ್ಥಳಿಯರು ಕಾಡಿಗೆ ತೆಗೆದುಕೊಂಡು ಹೋಗಿ ಆನೆಗೆ ಪೂರೈಸುತ್ತಿದ್ದಾರೆ. ಜತೆಗೆ ನೀರು ಇತ್ಯಾದಿ ಆಹಾರವನ್ನು ಒದಗಿಸಿ ಆರೈಕೆ ನಡೆಸುತ್ತಿದ್ದಾರೆ. ಸ್ಥಳಿಯ ನಿವಾಸಿ ಸುಬ್ರಹ್ಮಣ್ಯ ಕೆ.ಎಸ್ಎಸ್ ಕಾಲೇಜಿನ ವಿದ್ಯಾರ್ಥಿ ದೀಪಕ್ ಕಳೆದ ಮೂರು ದಿನಗಳಿಂದ ಆನೆಗೆ ಆಹಾರ ಪೂರೈಕೆಯಲ್ಲಿ ನಿರತನಾಗಿದ್ದಾನೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…