ವಿಶೇಷ ವರದಿಗಳು

ಚಿಕಿತ್ಸೆಗೊಂಡರೂ ಕಾಡಾನೆಗೆ ತಪ್ಪದ ಸಂಕಟ….! , ಮತ್ತೆ ಚಡಪಡಿಸುತ್ತಿರುವ ಕಾಡಾನೆ

Share

ಬಾಳುಗೋಡು: ಎರಡು ದಿನಗಳ ಹಿಂದಷ್ಟೇ ಚಿಕಿತ್ಸೆಗೆ ಒಳಗಾಗಿದ್ದ ಕಾಡಾನೆಗೆ ಮತ್ತೆ ಸಂಕಟಕ್ಕೆ ಒಳಗಾಗಿದೆ. ಕಾಡಿನಲ್ಲಿದ್ದ ಕಾಡಾನೆಗೆ ಇನ್ನೊಂದು ಆನೆ ತಿವಿದು ಮತ್ತೆ ನೋವಿಗೆ ಒಳಗಾಗಿದೆ. ನೋವಿನಿಂದ ಇದ್ದ ಆನೆಗೆ ಮತ್ತೆ ಸಂಕಟ ಎದುರಾಗಿದೆ.

ಬಾಳುಗೋಡು ಮೀಸಲು ಅರಣ್ಯದಲ್ಲಿ ಮುಂಗಾಲಿಗೆ ಗಾಯಗಳಾಗಿದ್ದ ಸ್ಥಿತಿಯಲ್ಲಿದ್ದ ಆನೆಗೆ  ಚಿಕಿತ್ಸೆ ನೀಡಿ ಬಿಡಲಾಗಿತ್ತು. ಅರಣ್ಯ ಇಲಾಖೆಯ ಸಿಬಂದಿಗಳು ನಂತರ ಆನೆಯ ಚಲನವಲನ ಗಮನಿಸುತ್ತಿದ್ದರು. ಇದೀಗ ಭಾನುವಾರ ಮತ್ತೆ ಇನ್ನೊಂದು ಕಾಡಾನೆ ತಿವಿದು ಗಾಯಗೊಂಡಿರುವ ಬಗ್ಗೆ ಅರಣ್ಯ ಇಲಾಖಾ ಸಿಬಂದಿಗಳು ಮಾಹಿತಿ ನೀಡಿದ್ದಾರೆ.

 

ಈ ವೇಳೆ ಸ್ಥಳೀಯರು ಆನೆಯನ್ನು ಶಬ್ಧ ಮಾಡಿ ಓಡಿಸುವ ಪ್ರಯತ್ನ ನಡೆಸಿ ಗಾಯಗೊಂಡ ಆನೆಯನ್ನು ಧಾಳಿಯಿಂದ ರಕ್ಷಿಸುವ ಪ್ರಯತ್ನಿಸಿದರು. ಈ ವೇಳೆ ಆನೆ ಕಾಡಿನ ಆನೆ ಸ್ಥಳೀ ಯರನ್ನು ಬೆನ್ನಟ್ಟಿದೆ.  ಗಾಯಗೊಂಡಿದ್ದ ಆನೆಯ ದೇಹದಿಂದ ರಕ್ತ ಸೋರಿಕೆಯಾಗುತ್ತಿತ್ತು ಮತ್ತು ನೆಲದಲ್ಲಿ ಭಾರಿ ಪ್ರಮಾಣದಲ್ಲಿ ರಕ್ತ ಚೆಲ್ಲಿತ್ತು. ಧಾಳಿಯಿಂದ ಬೆದರಿದ ಆನೆ ಕಾಡಿನತ್ತ ತೆರಳಲು ಹಿಂದೇಟು ಹಾಕುತ್ತಿದೆ ಎಂದು ಸ್ಥಳೀಯರು ಹೇಳುತ್ತಾರೆ. ಗಾಯಗೊಂಡ ಆನೆ ಮೇಲೆ ಸ್ಥಳೀಯರು  ಪ್ರೀತಿ ತೋರುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಆನೆಗೆ ಆಹಾರದ ಕೊರತೆ ಆಗದಂತೆ ಬೈನೆಮರದ ಮೇವನ್ನು ಸ್ಥಳಿಯರು ಕಾಡಿಗೆ ತೆಗೆದುಕೊಂಡು ಹೋಗಿ ಆನೆಗೆ ಪೂರೈಸುತ್ತಿದ್ದಾರೆ. ಜತೆಗೆ ನೀರು ಇತ್ಯಾದಿ ಆಹಾರವನ್ನು ಒದಗಿಸಿ ಆರೈಕೆ ನಡೆಸುತ್ತಿದ್ದಾರೆ. ಸ್ಥಳಿಯ ನಿವಾಸಿ ಸುಬ್ರಹ್ಮಣ್ಯ ಕೆ.ಎಸ್‍ಎಸ್ ಕಾಲೇಜಿನ ವಿದ್ಯಾರ್ಥಿ ದೀಪಕ್ ಕಳೆದ ಮೂರು ದಿನಗಳಿಂದ ಆನೆಗೆ ಆಹಾರ ಪೂರೈಕೆಯಲ್ಲಿ ನಿರತನಾಗಿದ್ದಾನೆ.

 

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

11 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

18 hours ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

18 hours ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

19 hours ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

1 day ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

1 day ago