ಬಾಳುಗೋಡು: ಎರಡು ದಿನಗಳ ಹಿಂದಷ್ಟೇ ಚಿಕಿತ್ಸೆಗೆ ಒಳಗಾಗಿದ್ದ ಕಾಡಾನೆಗೆ ಮತ್ತೆ ಸಂಕಟಕ್ಕೆ ಒಳಗಾಗಿದೆ. ಕಾಡಿನಲ್ಲಿದ್ದ ಕಾಡಾನೆಗೆ ಇನ್ನೊಂದು ಆನೆ ತಿವಿದು ಮತ್ತೆ ನೋವಿಗೆ ಒಳಗಾಗಿದೆ. ನೋವಿನಿಂದ ಇದ್ದ ಆನೆಗೆ ಮತ್ತೆ ಸಂಕಟ ಎದುರಾಗಿದೆ.
ಬಾಳುಗೋಡು ಮೀಸಲು ಅರಣ್ಯದಲ್ಲಿ ಮುಂಗಾಲಿಗೆ ಗಾಯಗಳಾಗಿದ್ದ ಸ್ಥಿತಿಯಲ್ಲಿದ್ದ ಆನೆಗೆ ಚಿಕಿತ್ಸೆ ನೀಡಿ ಬಿಡಲಾಗಿತ್ತು. ಅರಣ್ಯ ಇಲಾಖೆಯ ಸಿಬಂದಿಗಳು ನಂತರ ಆನೆಯ ಚಲನವಲನ ಗಮನಿಸುತ್ತಿದ್ದರು. ಇದೀಗ ಭಾನುವಾರ ಮತ್ತೆ ಇನ್ನೊಂದು ಕಾಡಾನೆ ತಿವಿದು ಗಾಯಗೊಂಡಿರುವ ಬಗ್ಗೆ ಅರಣ್ಯ ಇಲಾಖಾ ಸಿಬಂದಿಗಳು ಮಾಹಿತಿ ನೀಡಿದ್ದಾರೆ.
ಈ ವೇಳೆ ಸ್ಥಳೀಯರು ಆನೆಯನ್ನು ಶಬ್ಧ ಮಾಡಿ ಓಡಿಸುವ ಪ್ರಯತ್ನ ನಡೆಸಿ ಗಾಯಗೊಂಡ ಆನೆಯನ್ನು ಧಾಳಿಯಿಂದ ರಕ್ಷಿಸುವ ಪ್ರಯತ್ನಿಸಿದರು. ಈ ವೇಳೆ ಆನೆ ಕಾಡಿನ ಆನೆ ಸ್ಥಳೀ ಯರನ್ನು ಬೆನ್ನಟ್ಟಿದೆ. ಗಾಯಗೊಂಡಿದ್ದ ಆನೆಯ ದೇಹದಿಂದ ರಕ್ತ ಸೋರಿಕೆಯಾಗುತ್ತಿತ್ತು ಮತ್ತು ನೆಲದಲ್ಲಿ ಭಾರಿ ಪ್ರಮಾಣದಲ್ಲಿ ರಕ್ತ ಚೆಲ್ಲಿತ್ತು. ಧಾಳಿಯಿಂದ ಬೆದರಿದ ಆನೆ ಕಾಡಿನತ್ತ ತೆರಳಲು ಹಿಂದೇಟು ಹಾಕುತ್ತಿದೆ ಎಂದು ಸ್ಥಳೀಯರು ಹೇಳುತ್ತಾರೆ. ಗಾಯಗೊಂಡ ಆನೆ ಮೇಲೆ ಸ್ಥಳೀಯರು ಪ್ರೀತಿ ತೋರುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಆನೆಗೆ ಆಹಾರದ ಕೊರತೆ ಆಗದಂತೆ ಬೈನೆಮರದ ಮೇವನ್ನು ಸ್ಥಳಿಯರು ಕಾಡಿಗೆ ತೆಗೆದುಕೊಂಡು ಹೋಗಿ ಆನೆಗೆ ಪೂರೈಸುತ್ತಿದ್ದಾರೆ. ಜತೆಗೆ ನೀರು ಇತ್ಯಾದಿ ಆಹಾರವನ್ನು ಒದಗಿಸಿ ಆರೈಕೆ ನಡೆಸುತ್ತಿದ್ದಾರೆ. ಸ್ಥಳಿಯ ನಿವಾಸಿ ಸುಬ್ರಹ್ಮಣ್ಯ ಕೆ.ಎಸ್ಎಸ್ ಕಾಲೇಜಿನ ವಿದ್ಯಾರ್ಥಿ ದೀಪಕ್ ಕಳೆದ ಮೂರು ದಿನಗಳಿಂದ ಆನೆಗೆ ಆಹಾರ ಪೂರೈಕೆಯಲ್ಲಿ ನಿರತನಾಗಿದ್ದಾನೆ.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…