Advertisement
ವಿಶೇಷ ವರದಿಗಳು

ಚಿಕಿತ್ಸೆಗೊಂಡರೂ ಕಾಡಾನೆಗೆ ತಪ್ಪದ ಸಂಕಟ….! , ಮತ್ತೆ ಚಡಪಡಿಸುತ್ತಿರುವ ಕಾಡಾನೆ

Share

ಬಾಳುಗೋಡು: ಎರಡು ದಿನಗಳ ಹಿಂದಷ್ಟೇ ಚಿಕಿತ್ಸೆಗೆ ಒಳಗಾಗಿದ್ದ ಕಾಡಾನೆಗೆ ಮತ್ತೆ ಸಂಕಟಕ್ಕೆ ಒಳಗಾಗಿದೆ. ಕಾಡಿನಲ್ಲಿದ್ದ ಕಾಡಾನೆಗೆ ಇನ್ನೊಂದು ಆನೆ ತಿವಿದು ಮತ್ತೆ ನೋವಿಗೆ ಒಳಗಾಗಿದೆ. ನೋವಿನಿಂದ ಇದ್ದ ಆನೆಗೆ ಮತ್ತೆ ಸಂಕಟ ಎದುರಾಗಿದೆ.

ಬಾಳುಗೋಡು ಮೀಸಲು ಅರಣ್ಯದಲ್ಲಿ ಮುಂಗಾಲಿಗೆ ಗಾಯಗಳಾಗಿದ್ದ ಸ್ಥಿತಿಯಲ್ಲಿದ್ದ ಆನೆಗೆ  ಚಿಕಿತ್ಸೆ ನೀಡಿ ಬಿಡಲಾಗಿತ್ತು. ಅರಣ್ಯ ಇಲಾಖೆಯ ಸಿಬಂದಿಗಳು ನಂತರ ಆನೆಯ ಚಲನವಲನ ಗಮನಿಸುತ್ತಿದ್ದರು. ಇದೀಗ ಭಾನುವಾರ ಮತ್ತೆ ಇನ್ನೊಂದು ಕಾಡಾನೆ ತಿವಿದು ಗಾಯಗೊಂಡಿರುವ ಬಗ್ಗೆ ಅರಣ್ಯ ಇಲಾಖಾ ಸಿಬಂದಿಗಳು ಮಾಹಿತಿ ನೀಡಿದ್ದಾರೆ.

 

ಈ ವೇಳೆ ಸ್ಥಳೀಯರು ಆನೆಯನ್ನು ಶಬ್ಧ ಮಾಡಿ ಓಡಿಸುವ ಪ್ರಯತ್ನ ನಡೆಸಿ ಗಾಯಗೊಂಡ ಆನೆಯನ್ನು ಧಾಳಿಯಿಂದ ರಕ್ಷಿಸುವ ಪ್ರಯತ್ನಿಸಿದರು. ಈ ವೇಳೆ ಆನೆ ಕಾಡಿನ ಆನೆ ಸ್ಥಳೀ ಯರನ್ನು ಬೆನ್ನಟ್ಟಿದೆ.  ಗಾಯಗೊಂಡಿದ್ದ ಆನೆಯ ದೇಹದಿಂದ ರಕ್ತ ಸೋರಿಕೆಯಾಗುತ್ತಿತ್ತು ಮತ್ತು ನೆಲದಲ್ಲಿ ಭಾರಿ ಪ್ರಮಾಣದಲ್ಲಿ ರಕ್ತ ಚೆಲ್ಲಿತ್ತು. ಧಾಳಿಯಿಂದ ಬೆದರಿದ ಆನೆ ಕಾಡಿನತ್ತ ತೆರಳಲು ಹಿಂದೇಟು ಹಾಕುತ್ತಿದೆ ಎಂದು ಸ್ಥಳೀಯರು ಹೇಳುತ್ತಾರೆ. ಗಾಯಗೊಂಡ ಆನೆ ಮೇಲೆ ಸ್ಥಳೀಯರು  ಪ್ರೀತಿ ತೋರುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಆನೆಗೆ ಆಹಾರದ ಕೊರತೆ ಆಗದಂತೆ ಬೈನೆಮರದ ಮೇವನ್ನು ಸ್ಥಳಿಯರು ಕಾಡಿಗೆ ತೆಗೆದುಕೊಂಡು ಹೋಗಿ ಆನೆಗೆ ಪೂರೈಸುತ್ತಿದ್ದಾರೆ. ಜತೆಗೆ ನೀರು ಇತ್ಯಾದಿ ಆಹಾರವನ್ನು ಒದಗಿಸಿ ಆರೈಕೆ ನಡೆಸುತ್ತಿದ್ದಾರೆ. ಸ್ಥಳಿಯ ನಿವಾಸಿ ಸುಬ್ರಹ್ಮಣ್ಯ ಕೆ.ಎಸ್‍ಎಸ್ ಕಾಲೇಜಿನ ವಿದ್ಯಾರ್ಥಿ ದೀಪಕ್ ಕಳೆದ ಮೂರು ದಿನಗಳಿಂದ ಆನೆಗೆ ಆಹಾರ ಪೂರೈಕೆಯಲ್ಲಿ ನಿರತನಾಗಿದ್ದಾನೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ದುರ್ಬಲ – ದೇಶದಲ್ಲಿ 40% ಮಳೆ ಕೊರತೆ, ಕರಾವಳಿ ಕರ್ನಾಟಕಕ್ಕೆ ಜೂನ್ 25ರ ಬಳಿಕ ಮಳೆ ನಿರೀಕ್ಷೆ

ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…

33 minutes ago

ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ

ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…

1 hour ago

PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ

PM-KISAN ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ರೈತರ ಖಾತೆಗಳಿಗೆ ಜಮೆ…

2 hours ago

ನಾಳೆ ನೀಟ್ ಪರೀಕ್ಷೆ- ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು – ದ.ಕ. ಜಿಲ್ಲೆಯಲ್ಲಿ ಬಿಗು ಭದ್ರತೆ, 12 ಕೇಂದ್ರಗಳಲ್ಲಿ ಪರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಮಂಗಳೂರಿನ 12…

2 hours ago

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…

12 hours ago

ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ

ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…

12 hours ago