Advertisement
ಧಾರ್ಮಿಕ

ಚಿನ್ನದ ರಥ ನಿರ್ಮಾಣವಾಗಲಿದೆ ಸುಬ್ರಹ್ಮಣ್ಯ ದೇವರಿಗೆ

Share

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ರಥ ನಿರ್ಮಾಣಗೊಳ್ಳಲಿದೆ.13 ವರ್ಷಗಳ ಹಿಂದಿನ ಪ್ರಸ್ತಾವನೆ ಈಗ ಮರುಜೀವ ಪಡೆದುಕೊಂಡಿದೆ.

2006ರಲ್ಲಿ ಮುಖ್ಯಮಂತ್ರಿ ಆಗಿದ್ದ ಎಚ್.ಡಿ ಕುಮಾರಸ್ವಾಮಿ ಅವರು ನೂತನ ಚಿನ್ನದ ರಥ ನಿರ್ಮಾಣಕ್ಕೆ ಸರಕಾರದಿಂದ ಅನುಮೋದನೆ ನೀಡಿದ್ದರು. ಅಂದು 15 ಕೋ ರೂ ವೆಚ್ಚದಲ್ಲಿ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿತ್ತು. ಟೆಂಡರು ಪ್ರಕ್ರಿಯೆ ಕೂಡ ನಡೆದಿತ್ತು. ಬಳಿಕ ದರ ನಿಗದಿಪಡಿಸುವಲ್ಲಿ ತಾಂತ್ರಿಕ ಅಡಚಣೆಗಳು ಬಂದ ಕಾರಣ ರಥ ನಿರ್ಮಾಣ ಕಾರ್ಯ ಸ್ಥಗಿತಗೊಂಡಿತ್ತು. ಇದೀಗ ಕುಕ್ಕೆ ದೇಗುಲದಲ್ಲಿ ರಥ ನಿರ್ಮಾಣವಾಗದೆ ಮುಖ್ಯಮಂತ್ರಿ ಸ್ಥಾನದಲ್ಲಿ ಇರುವವರಿಗೆ ದೋಷ ಉಂಟಾಗುವ ಸಾಧ್ಯತೆ ಕುರಿತು ಜ್ಯೋತಿಷಿ ದ್ವಾರಕನಾಥ್ ಅವರಿಂದ ಸಲಹೆಗಳು ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಮುಜರಾಯಿ ಇಲಾಖೆಗೆ ರಥ ನಿರ್ಮಾಣಕ್ಕೆ ಸಂಬಂಧಿಸಿ ತತ್‍ಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯೊಂದಿಗೆ ಈ ಬಗ್ಗೆ ಸಮಾಲೋಚನಾ ಸಭೆ ನಡೆಸಿದ ಮುಖ್ಯಮಂತ್ರಿಗಳು ಚಿನ್ನದ ರಥ ಯೋಜನೆ ಬಗ್ಗೆ ತಿಳಿದುಕೊಂಡರು. ಕುಕ್ಕೆ ದೇವಳದಲ್ಲಿ ಸುಮಾರು 320 ಕೋಟಿ ರೂ ಸ್ವಂತ ನಿಧಿ ಇದೆ. ಅದರ ಜೊತೆ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮತ್ತು ದೇವಸ್ಥಾನದ ಅನುದಾನ ಬಳಸಿ ಸುಮಾರು 80 ರಿಂದ 85 ಕೋಟಿ ರೂ ವೆಚ್ಚದಲ್ಲಿ 240 ಕೆ.ಜಿ ಚಿನ್ನ ಬಳಸಿ ನೂತನ ರಥ ನಿರ್ಮಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. ಈ ಸಂಬಂಧ ಎ.29 ರಂದು ಕುಕ್ಕೆ ದೇವಸ್ಥಾನದಲ್ಲಿ ಅಡಳಿತ ಮಂಡಳಿ ಸಭೆ ಕರೆಯಲಾಗಿದೆ.

2006ರಲ್ಲಿ ರಥ ನಿರ್ಮಾಣಕ್ಕೆ ರೂ.15 ಕೋಟಿ ರೂ ವೆಚ್ಚದ ಅಂದಾಜು ಪಟ್ಟಿ ತಯಾರಿಸಲಾಗಿತ್ತು.ಅಲ್ಲದೆ ರಥ ನಿರ್ಮಾಣವು ಕೂಡಾ ಆರಂಭವಾಗಿತ್ತು. ಖ್ಯಾತ ಶಿಲ್ಪಿ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯರ ನೇತೃತ್ವದಲ್ಲಿ ರಥ ನಿರ್ಮಾಣ ಕಾರ್ಯವು ಆರಂಭವಾಗಿತ್ತು.ರಥಕ್ಕೆ ಅಳವಡಿಸುವ ಶಿಲ್ಪಕಲಾಕೃತಿಗಳನ್ನು ನಿರ್ಮಿಸಲಾಗಿತ್ತು.ಮರದ ಕೆತ್ತನೆಗಳು ಸಮಾಪ್ತಿ ಹಂತ ತಲುಪಿತ್ತು.ಆದರೆ ಚಿನ್ನ ಅಳವಡಿಕೆ ಸಮಯದಲ್ಲಿ ಯೋಜನೆ ಸ್ಥಗಿತಗೊಂಡಿತ್ತು.ಆದುದರಿಂದ ಇಂದಿಗೂ ಕೂಡಾ ರಥದ ಅಡ್ಡೆಯು ಶ್ರೀ ದೇವಳದಲ್ಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

1 hour ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

2 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

2 days ago