Advertisement
ಧಾರ್ಮಿಕ

ಚಿನ್ನದ ರಥ ನಿರ್ಮಾಣವಾಗಲಿದೆ ಸುಬ್ರಹ್ಮಣ್ಯ ದೇವರಿಗೆ

Share

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ರಥ ನಿರ್ಮಾಣಗೊಳ್ಳಲಿದೆ.13 ವರ್ಷಗಳ ಹಿಂದಿನ ಪ್ರಸ್ತಾವನೆ ಈಗ ಮರುಜೀವ ಪಡೆದುಕೊಂಡಿದೆ.

2006ರಲ್ಲಿ ಮುಖ್ಯಮಂತ್ರಿ ಆಗಿದ್ದ ಎಚ್.ಡಿ ಕುಮಾರಸ್ವಾಮಿ ಅವರು ನೂತನ ಚಿನ್ನದ ರಥ ನಿರ್ಮಾಣಕ್ಕೆ ಸರಕಾರದಿಂದ ಅನುಮೋದನೆ ನೀಡಿದ್ದರು. ಅಂದು 15 ಕೋ ರೂ ವೆಚ್ಚದಲ್ಲಿ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿತ್ತು. ಟೆಂಡರು ಪ್ರಕ್ರಿಯೆ ಕೂಡ ನಡೆದಿತ್ತು. ಬಳಿಕ ದರ ನಿಗದಿಪಡಿಸುವಲ್ಲಿ ತಾಂತ್ರಿಕ ಅಡಚಣೆಗಳು ಬಂದ ಕಾರಣ ರಥ ನಿರ್ಮಾಣ ಕಾರ್ಯ ಸ್ಥಗಿತಗೊಂಡಿತ್ತು. ಇದೀಗ ಕುಕ್ಕೆ ದೇಗುಲದಲ್ಲಿ ರಥ ನಿರ್ಮಾಣವಾಗದೆ ಮುಖ್ಯಮಂತ್ರಿ ಸ್ಥಾನದಲ್ಲಿ ಇರುವವರಿಗೆ ದೋಷ ಉಂಟಾಗುವ ಸಾಧ್ಯತೆ ಕುರಿತು ಜ್ಯೋತಿಷಿ ದ್ವಾರಕನಾಥ್ ಅವರಿಂದ ಸಲಹೆಗಳು ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಮುಜರಾಯಿ ಇಲಾಖೆಗೆ ರಥ ನಿರ್ಮಾಣಕ್ಕೆ ಸಂಬಂಧಿಸಿ ತತ್‍ಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದ್ದಾರೆ.

Advertisement

ಶನಿವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯೊಂದಿಗೆ ಈ ಬಗ್ಗೆ ಸಮಾಲೋಚನಾ ಸಭೆ ನಡೆಸಿದ ಮುಖ್ಯಮಂತ್ರಿಗಳು ಚಿನ್ನದ ರಥ ಯೋಜನೆ ಬಗ್ಗೆ ತಿಳಿದುಕೊಂಡರು. ಕುಕ್ಕೆ ದೇವಳದಲ್ಲಿ ಸುಮಾರು 320 ಕೋಟಿ ರೂ ಸ್ವಂತ ನಿಧಿ ಇದೆ. ಅದರ ಜೊತೆ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮತ್ತು ದೇವಸ್ಥಾನದ ಅನುದಾನ ಬಳಸಿ ಸುಮಾರು 80 ರಿಂದ 85 ಕೋಟಿ ರೂ ವೆಚ್ಚದಲ್ಲಿ 240 ಕೆ.ಜಿ ಚಿನ್ನ ಬಳಸಿ ನೂತನ ರಥ ನಿರ್ಮಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. ಈ ಸಂಬಂಧ ಎ.29 ರಂದು ಕುಕ್ಕೆ ದೇವಸ್ಥಾನದಲ್ಲಿ ಅಡಳಿತ ಮಂಡಳಿ ಸಭೆ ಕರೆಯಲಾಗಿದೆ.

2006ರಲ್ಲಿ ರಥ ನಿರ್ಮಾಣಕ್ಕೆ ರೂ.15 ಕೋಟಿ ರೂ ವೆಚ್ಚದ ಅಂದಾಜು ಪಟ್ಟಿ ತಯಾರಿಸಲಾಗಿತ್ತು.ಅಲ್ಲದೆ ರಥ ನಿರ್ಮಾಣವು ಕೂಡಾ ಆರಂಭವಾಗಿತ್ತು. ಖ್ಯಾತ ಶಿಲ್ಪಿ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯರ ನೇತೃತ್ವದಲ್ಲಿ ರಥ ನಿರ್ಮಾಣ ಕಾರ್ಯವು ಆರಂಭವಾಗಿತ್ತು.ರಥಕ್ಕೆ ಅಳವಡಿಸುವ ಶಿಲ್ಪಕಲಾಕೃತಿಗಳನ್ನು ನಿರ್ಮಿಸಲಾಗಿತ್ತು.ಮರದ ಕೆತ್ತನೆಗಳು ಸಮಾಪ್ತಿ ಹಂತ ತಲುಪಿತ್ತು.ಆದರೆ ಚಿನ್ನ ಅಳವಡಿಕೆ ಸಮಯದಲ್ಲಿ ಯೋಜನೆ ಸ್ಥಗಿತಗೊಂಡಿತ್ತು.ಆದುದರಿಂದ ಇಂದಿಗೂ ಕೂಡಾ ರಥದ ಅಡ್ಡೆಯು ಶ್ರೀ ದೇವಳದಲ್ಲಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

23 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

24 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago