ಚಿರತೆ ದಾಳಿಯಾದರೆ ಮಾಡುವುದೇನು…..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕೆಲವು ವರ್ಷಗಳ ಹಿಂದೆ ಮೈಸೂರಿನಲ್ಲಿ  ಮದ ಏರಿದ ಆನೆ ಪೇಟೆಯಲ್ಲಿ  ಓಡಾಡಿ ಹಾನಿ ಮಾಡಿತ್ತು. ಅದೇ ಸಂದರ್ಭ ಪ್ರಶ್ನೆಯೊಂದು ಬಂತು… ಪುತ್ತೂರು, ಸುಳ್ಯ, ಮಂಗಳೂರು ನಗರಕ್ಕೆ ಆನೆ ಬಂದರೆ ತಕ್ಷಣದ ಪರಿಹಾರ ಏನು ? ಈ ಬಗ್ಗೆ ಅರಣ್ಯ ಇಲಾಖೆ ಸಹಿತ ವಿವಿಧ ಇಲಾಖೆಗಳ ಬಳಿ ಮಾತನಾಡಿಸಲಾಯಿತು. ತಕ್ಷಣದ ಪರಿಹಾರ ಏನೂ ಇರಲಿಲ್ಲ…!

Advertisement

ಬಳಿಕ ಈ ಸಂಗತಿ ಮರೆತೇ ಹೋಗಿತ್ತು. ಅದಾಗಿ ಕೆಲವೇ ಸಮಯದಲ್ಲಿ  ಪುತ್ತೂರು ನಗರದಲ್ಲಿ  ಲಾರಿಯಲ್ಲಿ  ಆನೆ ಸಾಗಾಟ ಮಾಡುತ್ತಿದ್ದಾಗ ಮದ ಏರಿದ ಆನೆ ಲಾರಿ ಚಾಲಕ ಹಾಗೂ ಮಾವುತ ಮೇಲೆ ಸಿಟ್ಟಾಯಿತು. ಎರಡು ದಿನಗಳ ಕಾಲ ಪುತ್ತೂರು ನಗರದಲ್ಲೇ ಆನೆ ಉಳಿಯಿತು. ವಾಹನ ಓಡಾಟಗಳಿಗೂ ಅಡ್ಡಿಯಾಯಿತು. ಆಗ ಇಲಾಖೆಗಳಿಗೂ ಮನವರಿಕೆಯಾಗಿತ್ತು.

ಈಗಲೂ ಅದೇ ಪ್ರಶ್ನೆ… ಸುಳ್ಯದ ಗ್ರಾಮೀಣ ಭಾಗ ಸೇರಿದಂತೆ ಪೇಟೆಗೆ ಚಿರತೆ ದಾಳಿ ಮಾಡಿದರೆ ತಕ್ಷಣದ ಕ್ರಮ ಏನು ? ಪರಿಹಾರ ಹೇಗೆ ? 

ಇದಕ್ಕೆ ಉತ್ತರ ಗುರುವಾರ ಬಳ್ಪದಲ್ಲಿ  ನಡೆದ ಚಿರತೆ ದಾಳಿ. ಯಾವುದೇ ಉರುಳಿಗೆ ಬಿದ್ದ ಚಿರತೆ ಯದ್ವಾತದ್ವ ಓಡಾಡಿತು, ದಾಳಿ ಮಾಡಿತು. ಸ್ಥಳೀಯರ ಮೇಲೆ ಮಾತ್ರವಲ್ಲ ಅರಣ್ಯ ಇಲಾಖೆಯ ಅಧಿಕಾರಿ, ಸಿಬಂದಿಗಳ ಮೇಲೂ ದಾಳಿ ಮಾಡಿತು.  ಆಗ ಮತ್ತಷ್ಟು ಅರಿವಾಯ್ತು, ಇಲಾಖೆಯ ಬಳಿ ಚಿರತೆ ಹಿಡಿಯುವ ಬಲೆ, ಜಿಲ್ಲೆಯಲ್ಲಿ ಚಿರತೆ ಹಿಡಿಯುವ ಕೌಶಲ್ಯ ಹೊಂದಿದ ಸಿಬಂದಿಗಳ ಕೊರತೆ, ಡ್ರೋನ್ ಕ್ಯಾಮರಾ ಸೇರಿದಂತೆ ಯಾವುದೇ ವ್ಯವಸ್ಥಿತ ಸಲಕರಣೆಗಳು ಇಲ್ಲ..!. ಈ ಹಿಂದೆ ಬೆಳ್ತಂಗಡಿ ತಾಲೂಕು ಸೇರಿದಂತೆ ವಿವಿದೆಡೆ ಚಿರತೆ ಪ್ರತ್ಯಕ್ಷವಾಗಿದೆ. ಬಳ್ಪ ಪರಿಸರದಲ್ಲೇ ಹಲವು ಬಾರಿ ಕಾಣಿಸಿಕೊಂಡಿದೆ. ಹಾಗಿದ್ದರೂ ಯಾವುದೇ ವ್ಯವಸ್ಥಿತ ಸಲಕರಣೆಗಳು, ಕೌಶಲ್ಯ ಭರಿತ ಸಿಬಂದಿಗಳು ಇಲ್ಲದೇ ಇರುವುದು  ಕಂಡುಬಂದಿದೆ. ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಈ ಬಗ್ಗೆ ಯೋಚನೆ ಮಾಡಬೇಕಿದೆ. ಜನರನ್ನು ಭಯದಿಂದ ಮುಕ್ತ ಮಾಡಲು ತಕ್ಷಣದ ಪರಿಹಾರ ಹಾಗೂ ಚಿರತೆ ಹಿಡಿಯುವ ಉಪಾಯ, ಓಡಿಸುವ ಗುಟ್ಟು ಇತ್ಯಾದಿಗಳ ಕಡೆಗೆ ಗಮನಹರಿಸಬೇಕಿದೆ.  ಬಳ್ಪದಲ್ಲಿ  ಹಲವು ಬಾರಿ ಚಿರತೆ ಪ್ರತ್ಯಕ್ಷವಾಗಿದೆ. ಈಗ ಪೇಟೆ ಸಮೀಪವೇ ಚಿರತೆ ಕಂಡುಬರುತ್ತಿರುವ ಕಾರಣ ತಕ್ಷಣವೇ ಹಿಡಿಯುವ ಹಾಗೂ ಜನರಿಗೂ ಹೇಗೆ ರಕ್ಷಣೆ ಎಂಬುದರ ಬಗ್ಗೆಯೂ ಮಾಹಿತಿ ಅಗತ್ಯವಾಗಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

6 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

6 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

6 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

16 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago

ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…

1 day ago