ಸುಳ್ಯ: ಕೆಲವು ವರ್ಷಗಳ ಹಿಂದೆ ಮೈಸೂರಿನಲ್ಲಿ ಮದ ಏರಿದ ಆನೆ ಪೇಟೆಯಲ್ಲಿ ಓಡಾಡಿ ಹಾನಿ ಮಾಡಿತ್ತು. ಅದೇ ಸಂದರ್ಭ ಪ್ರಶ್ನೆಯೊಂದು ಬಂತು… ಪುತ್ತೂರು, ಸುಳ್ಯ, ಮಂಗಳೂರು ನಗರಕ್ಕೆ ಆನೆ ಬಂದರೆ ತಕ್ಷಣದ ಪರಿಹಾರ ಏನು ? ಈ ಬಗ್ಗೆ ಅರಣ್ಯ ಇಲಾಖೆ ಸಹಿತ ವಿವಿಧ ಇಲಾಖೆಗಳ ಬಳಿ ಮಾತನಾಡಿಸಲಾಯಿತು. ತಕ್ಷಣದ ಪರಿಹಾರ ಏನೂ ಇರಲಿಲ್ಲ…!
ಬಳಿಕ ಈ ಸಂಗತಿ ಮರೆತೇ ಹೋಗಿತ್ತು. ಅದಾಗಿ ಕೆಲವೇ ಸಮಯದಲ್ಲಿ ಪುತ್ತೂರು ನಗರದಲ್ಲಿ ಲಾರಿಯಲ್ಲಿ ಆನೆ ಸಾಗಾಟ ಮಾಡುತ್ತಿದ್ದಾಗ ಮದ ಏರಿದ ಆನೆ ಲಾರಿ ಚಾಲಕ ಹಾಗೂ ಮಾವುತ ಮೇಲೆ ಸಿಟ್ಟಾಯಿತು. ಎರಡು ದಿನಗಳ ಕಾಲ ಪುತ್ತೂರು ನಗರದಲ್ಲೇ ಆನೆ ಉಳಿಯಿತು. ವಾಹನ ಓಡಾಟಗಳಿಗೂ ಅಡ್ಡಿಯಾಯಿತು. ಆಗ ಇಲಾಖೆಗಳಿಗೂ ಮನವರಿಕೆಯಾಗಿತ್ತು.
ಈಗಲೂ ಅದೇ ಪ್ರಶ್ನೆ… ಸುಳ್ಯದ ಗ್ರಾಮೀಣ ಭಾಗ ಸೇರಿದಂತೆ ಪೇಟೆಗೆ ಚಿರತೆ ದಾಳಿ ಮಾಡಿದರೆ ತಕ್ಷಣದ ಕ್ರಮ ಏನು ? ಪರಿಹಾರ ಹೇಗೆ ?
ಇದಕ್ಕೆ ಉತ್ತರ ಗುರುವಾರ ಬಳ್ಪದಲ್ಲಿ ನಡೆದ ಚಿರತೆ ದಾಳಿ. ಯಾವುದೇ ಉರುಳಿಗೆ ಬಿದ್ದ ಚಿರತೆ ಯದ್ವಾತದ್ವ ಓಡಾಡಿತು, ದಾಳಿ ಮಾಡಿತು. ಸ್ಥಳೀಯರ ಮೇಲೆ ಮಾತ್ರವಲ್ಲ ಅರಣ್ಯ ಇಲಾಖೆಯ ಅಧಿಕಾರಿ, ಸಿಬಂದಿಗಳ ಮೇಲೂ ದಾಳಿ ಮಾಡಿತು. ಆಗ ಮತ್ತಷ್ಟು ಅರಿವಾಯ್ತು, ಇಲಾಖೆಯ ಬಳಿ ಚಿರತೆ ಹಿಡಿಯುವ ಬಲೆ, ಜಿಲ್ಲೆಯಲ್ಲಿ ಚಿರತೆ ಹಿಡಿಯುವ ಕೌಶಲ್ಯ ಹೊಂದಿದ ಸಿಬಂದಿಗಳ ಕೊರತೆ, ಡ್ರೋನ್ ಕ್ಯಾಮರಾ ಸೇರಿದಂತೆ ಯಾವುದೇ ವ್ಯವಸ್ಥಿತ ಸಲಕರಣೆಗಳು ಇಲ್ಲ..!. ಈ ಹಿಂದೆ ಬೆಳ್ತಂಗಡಿ ತಾಲೂಕು ಸೇರಿದಂತೆ ವಿವಿದೆಡೆ ಚಿರತೆ ಪ್ರತ್ಯಕ್ಷವಾಗಿದೆ. ಬಳ್ಪ ಪರಿಸರದಲ್ಲೇ ಹಲವು ಬಾರಿ ಕಾಣಿಸಿಕೊಂಡಿದೆ. ಹಾಗಿದ್ದರೂ ಯಾವುದೇ ವ್ಯವಸ್ಥಿತ ಸಲಕರಣೆಗಳು, ಕೌಶಲ್ಯ ಭರಿತ ಸಿಬಂದಿಗಳು ಇಲ್ಲದೇ ಇರುವುದು ಕಂಡುಬಂದಿದೆ. ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಈ ಬಗ್ಗೆ ಯೋಚನೆ ಮಾಡಬೇಕಿದೆ. ಜನರನ್ನು ಭಯದಿಂದ ಮುಕ್ತ ಮಾಡಲು ತಕ್ಷಣದ ಪರಿಹಾರ ಹಾಗೂ ಚಿರತೆ ಹಿಡಿಯುವ ಉಪಾಯ, ಓಡಿಸುವ ಗುಟ್ಟು ಇತ್ಯಾದಿಗಳ ಕಡೆಗೆ ಗಮನಹರಿಸಬೇಕಿದೆ. ಬಳ್ಪದಲ್ಲಿ ಹಲವು ಬಾರಿ ಚಿರತೆ ಪ್ರತ್ಯಕ್ಷವಾಗಿದೆ. ಈಗ ಪೇಟೆ ಸಮೀಪವೇ ಚಿರತೆ ಕಂಡುಬರುತ್ತಿರುವ ಕಾರಣ ತಕ್ಷಣವೇ ಹಿಡಿಯುವ ಹಾಗೂ ಜನರಿಗೂ ಹೇಗೆ ರಕ್ಷಣೆ ಎಂಬುದರ ಬಗ್ಗೆಯೂ ಮಾಹಿತಿ ಅಗತ್ಯವಾಗಿದೆ.
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…