Advertisement

ಚಿರತೆ ದಾಳಿಯಾದರೆ ಮಾಡುವುದೇನು…..?

Share

ಸುಳ್ಯ: ಕೆಲವು ವರ್ಷಗಳ ಹಿಂದೆ ಮೈಸೂರಿನಲ್ಲಿ  ಮದ ಏರಿದ ಆನೆ ಪೇಟೆಯಲ್ಲಿ  ಓಡಾಡಿ ಹಾನಿ ಮಾಡಿತ್ತು. ಅದೇ ಸಂದರ್ಭ ಪ್ರಶ್ನೆಯೊಂದು ಬಂತು… ಪುತ್ತೂರು, ಸುಳ್ಯ, ಮಂಗಳೂರು ನಗರಕ್ಕೆ ಆನೆ ಬಂದರೆ ತಕ್ಷಣದ ಪರಿಹಾರ ಏನು ? ಈ ಬಗ್ಗೆ ಅರಣ್ಯ ಇಲಾಖೆ ಸಹಿತ ವಿವಿಧ ಇಲಾಖೆಗಳ ಬಳಿ ಮಾತನಾಡಿಸಲಾಯಿತು. ತಕ್ಷಣದ ಪರಿಹಾರ ಏನೂ ಇರಲಿಲ್ಲ…!

ಬಳಿಕ ಈ ಸಂಗತಿ ಮರೆತೇ ಹೋಗಿತ್ತು. ಅದಾಗಿ ಕೆಲವೇ ಸಮಯದಲ್ಲಿ  ಪುತ್ತೂರು ನಗರದಲ್ಲಿ  ಲಾರಿಯಲ್ಲಿ  ಆನೆ ಸಾಗಾಟ ಮಾಡುತ್ತಿದ್ದಾಗ ಮದ ಏರಿದ ಆನೆ ಲಾರಿ ಚಾಲಕ ಹಾಗೂ ಮಾವುತ ಮೇಲೆ ಸಿಟ್ಟಾಯಿತು. ಎರಡು ದಿನಗಳ ಕಾಲ ಪುತ್ತೂರು ನಗರದಲ್ಲೇ ಆನೆ ಉಳಿಯಿತು. ವಾಹನ ಓಡಾಟಗಳಿಗೂ ಅಡ್ಡಿಯಾಯಿತು. ಆಗ ಇಲಾಖೆಗಳಿಗೂ ಮನವರಿಕೆಯಾಗಿತ್ತು.

ಈಗಲೂ ಅದೇ ಪ್ರಶ್ನೆ… ಸುಳ್ಯದ ಗ್ರಾಮೀಣ ಭಾಗ ಸೇರಿದಂತೆ ಪೇಟೆಗೆ ಚಿರತೆ ದಾಳಿ ಮಾಡಿದರೆ ತಕ್ಷಣದ ಕ್ರಮ ಏನು ? ಪರಿಹಾರ ಹೇಗೆ ? 

ಇದಕ್ಕೆ ಉತ್ತರ ಗುರುವಾರ ಬಳ್ಪದಲ್ಲಿ  ನಡೆದ ಚಿರತೆ ದಾಳಿ. ಯಾವುದೇ ಉರುಳಿಗೆ ಬಿದ್ದ ಚಿರತೆ ಯದ್ವಾತದ್ವ ಓಡಾಡಿತು, ದಾಳಿ ಮಾಡಿತು. ಸ್ಥಳೀಯರ ಮೇಲೆ ಮಾತ್ರವಲ್ಲ ಅರಣ್ಯ ಇಲಾಖೆಯ ಅಧಿಕಾರಿ, ಸಿಬಂದಿಗಳ ಮೇಲೂ ದಾಳಿ ಮಾಡಿತು.  ಆಗ ಮತ್ತಷ್ಟು ಅರಿವಾಯ್ತು, ಇಲಾಖೆಯ ಬಳಿ ಚಿರತೆ ಹಿಡಿಯುವ ಬಲೆ, ಜಿಲ್ಲೆಯಲ್ಲಿ ಚಿರತೆ ಹಿಡಿಯುವ ಕೌಶಲ್ಯ ಹೊಂದಿದ ಸಿಬಂದಿಗಳ ಕೊರತೆ, ಡ್ರೋನ್ ಕ್ಯಾಮರಾ ಸೇರಿದಂತೆ ಯಾವುದೇ ವ್ಯವಸ್ಥಿತ ಸಲಕರಣೆಗಳು ಇಲ್ಲ..!. ಈ ಹಿಂದೆ ಬೆಳ್ತಂಗಡಿ ತಾಲೂಕು ಸೇರಿದಂತೆ ವಿವಿದೆಡೆ ಚಿರತೆ ಪ್ರತ್ಯಕ್ಷವಾಗಿದೆ. ಬಳ್ಪ ಪರಿಸರದಲ್ಲೇ ಹಲವು ಬಾರಿ ಕಾಣಿಸಿಕೊಂಡಿದೆ. ಹಾಗಿದ್ದರೂ ಯಾವುದೇ ವ್ಯವಸ್ಥಿತ ಸಲಕರಣೆಗಳು, ಕೌಶಲ್ಯ ಭರಿತ ಸಿಬಂದಿಗಳು ಇಲ್ಲದೇ ಇರುವುದು  ಕಂಡುಬಂದಿದೆ. ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಈ ಬಗ್ಗೆ ಯೋಚನೆ ಮಾಡಬೇಕಿದೆ. ಜನರನ್ನು ಭಯದಿಂದ ಮುಕ್ತ ಮಾಡಲು ತಕ್ಷಣದ ಪರಿಹಾರ ಹಾಗೂ ಚಿರತೆ ಹಿಡಿಯುವ ಉಪಾಯ, ಓಡಿಸುವ ಗುಟ್ಟು ಇತ್ಯಾದಿಗಳ ಕಡೆಗೆ ಗಮನಹರಿಸಬೇಕಿದೆ.  ಬಳ್ಪದಲ್ಲಿ  ಹಲವು ಬಾರಿ ಚಿರತೆ ಪ್ರತ್ಯಕ್ಷವಾಗಿದೆ. ಈಗ ಪೇಟೆ ಸಮೀಪವೇ ಚಿರತೆ ಕಂಡುಬರುತ್ತಿರುವ ಕಾರಣ ತಕ್ಷಣವೇ ಹಿಡಿಯುವ ಹಾಗೂ ಜನರಿಗೂ ಹೇಗೆ ರಕ್ಷಣೆ ಎಂಬುದರ ಬಗ್ಗೆಯೂ ಮಾಹಿತಿ ಅಗತ್ಯವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

4 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

14 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

15 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

15 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

21 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

23 hours ago