ನವದೆಹಲಿ: ಭಾರತ-ಚೀನಾ ನಡುವೆ ಲಡಾಖ್ ಗಡಿಯ ಗಾಲ್ವಾನ್ ಕಣಿವೆಯಲ್ಲಿಚೀನಾ ನಡೆಸಿದ ಅಪ್ರಚೋದಿತ ದಾಳಿಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ . ಇದೇ ವೇಳೆ ಭಾರತೀಯ ಸೇನೆ ನಡೆಸಿದ ಪ್ರತಿದಾಳಿಗೆ ಚೀನಾದ 43 ಸೈನಿಕರು ಹತರಾಗಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ರಾತ್ರಿ ಚೀನಾ ನಡೆಸಿದ ದಾಳಿಗೆ ಭಾರತೀಯ ಸೇನೆಯ ಓರ್ವ ಅಧಿಕಾರಿ ಸೇರಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು ಎಂದು ವರದಿಯಾಗಿತ್ತು. ಇದೀಗ ಮತ್ತೆ ಚೀನಾ ನಡೆಸಿದ ದಾಳಿಗೆ ಭಾರತದ ಸುಮಾರು 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆಯು ಸ್ಪಷ್ಟಪಡಿಸಿದೆ. ಚೀನಾದ ಸೈನಿಕರ ಸಾವಿನ ಬಗ್ಗೆ ಖಚಿತವಾದ ಮಾಹಿತಿಗಳು ಲಭ್ಯವಾಗಿಲ್ಲ.
ಲಡಾಖ್ ಗಡಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಪಟ್ಟಂತೆ ಭಾರತದ ರಕ್ಷಣ ಸಚಿವ ರಾಜನಾಥ್ ಸಿಂಗ್ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಇತರೆ ಮೂರು ಸೇನೆಗಳ ಮುಖ್ಯಸ್ಥರ ಜೊತೆ ಒಂದು ಸುತ್ತಿನ ಸಭೆ ನಡೆಸಲಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…