ಮರ್ಕಂಜ: ಮರ್ಕಂಜದ ಚೀಮಾಡ್ ನಲ್ಲಿರುವ ಪದ್ಮನಾಭ ಅವರ ಮನೆಗೆ ಬೆಳಕು ಹರಿಯಿತು.
ಈ ಮನೆಗೆ ಕಳೆದ ಅನೇಕ ವರ್ಷಗಳಿಂದ ವಿದ್ಯುತ್ ಸಂಪರ್ಕ ಬಿಡಿ, ರೇಶನ್ ಕಾರ್ಡೂ ಇರಲಿಲ್ಲ. ಯುವ ಬ್ರಿಗೆಡ್ ಗಮನಕ್ಕೆ ಈ ಸಂಗತಿ ಬಂದ ಬಳಿಕ ಮನೆಗೆ ಬೆಳಕು ಹರಿದಿತ್ತು. ಇದೀಗ ಮನೆಯಲ್ಲಿ ವಿದ್ಯುತ್ ದೀಪ ಉರಿಯುವ ಮೂಲಕ ಬೆಳಕೇ ಹರಿದಿದೆ. ಹೀಗಾಗಿ ಯುವಬ್ರಿಗೆಡ್ ತಂಡಕ್ಕೆ ಮನೆಯವರಿಂದ ಧನ್ಯವಾದ. ಸಾಮಾಜಿಕ ಕೆಲಸ ಮಾಡುತ್ತಿರುವ ಯುವಬ್ರಿಗೆಡ್ ತಂಡಕ್ಕೆ ಸುಳ್ಯನ್ಯೂಸ್.ಕಾಂ ಕಡೆಯಿಂದಲೂ ಅಭಿನಂದನೆ.
ಮರ್ಕಂಜದ ಚೀಮಾಡ್ ನಲ್ಲಿರುವ ಪದ್ಮನಾಭ ಅವರ ಮನೆಗೆ ಯುವ ಬ್ರಿಗೇಡ್ ಕಡೆಯಿಂದ ಸೋಲಾರ್ ಅಳವಡಿಸಿಕೊಡಲಾಗಿತ್ತು.ನಂತರ ತಹಶೀಲ್ದಾರಾದ ಕುಂಞಿ ಅಹಮ್ಮದ್ ಅವರ ಸಹಾಯದಿಂದ ರೇಶನ್ ಕಾರ್ಡ್ ಹಾಗೂ ಇತರೆ ಸೌಲಭ್ಯಗಳನ್ನು ದೊರಕಿಸಿ ಕೊಡಲಾಗಿತ್ತು. ಭಾನುವಾರ ಮಧುಕಿರಣ್ ಅನ್ನಪೂರ್ಣ ಎಲೆಕ್ಟ್ರಿಕಲ್, ವೆಂಕಟ್ರಮಣ ಗೌಡ ಪರಿವಾರಕಾನ , ರವಿಕುಮಾರ್ ಕುರುಂಜಿ ಇವರೆಲ್ಲರ ಸಹಕಾರದೊಂದಿಗೆ ಯುವ ಬ್ರಿಗೇಡ್ ತಂಡವು ಉಚಿತವಾಗಿ ವಿದ್ಯುತ್ ವಯರಿಂಗ್ ವ್ಯವಸ್ಥೆ ಮಾಡಿತು.ಈಗ ಬೆಳಕು ಹರಿದಿದೆ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…