ಮರ್ಕಂಜ: ಮರ್ಕಂಜದ ಚೀಮಾಡ್ ನಲ್ಲಿರುವ ಪದ್ಮನಾಭ ಅವರ ಮನೆಗೆ ಬೆಳಕು ಹರಿಯಿತು.
ಈ ಮನೆಗೆ ಕಳೆದ ಅನೇಕ ವರ್ಷಗಳಿಂದ ವಿದ್ಯುತ್ ಸಂಪರ್ಕ ಬಿಡಿ, ರೇಶನ್ ಕಾರ್ಡೂ ಇರಲಿಲ್ಲ. ಯುವ ಬ್ರಿಗೆಡ್ ಗಮನಕ್ಕೆ ಈ ಸಂಗತಿ ಬಂದ ಬಳಿಕ ಮನೆಗೆ ಬೆಳಕು ಹರಿದಿತ್ತು. ಇದೀಗ ಮನೆಯಲ್ಲಿ ವಿದ್ಯುತ್ ದೀಪ ಉರಿಯುವ ಮೂಲಕ ಬೆಳಕೇ ಹರಿದಿದೆ. ಹೀಗಾಗಿ ಯುವಬ್ರಿಗೆಡ್ ತಂಡಕ್ಕೆ ಮನೆಯವರಿಂದ ಧನ್ಯವಾದ. ಸಾಮಾಜಿಕ ಕೆಲಸ ಮಾಡುತ್ತಿರುವ ಯುವಬ್ರಿಗೆಡ್ ತಂಡಕ್ಕೆ ಸುಳ್ಯನ್ಯೂಸ್.ಕಾಂ ಕಡೆಯಿಂದಲೂ ಅಭಿನಂದನೆ.
ಮರ್ಕಂಜದ ಚೀಮಾಡ್ ನಲ್ಲಿರುವ ಪದ್ಮನಾಭ ಅವರ ಮನೆಗೆ ಯುವ ಬ್ರಿಗೇಡ್ ಕಡೆಯಿಂದ ಸೋಲಾರ್ ಅಳವಡಿಸಿಕೊಡಲಾಗಿತ್ತು.ನಂತರ ತಹಶೀಲ್ದಾರಾದ ಕುಂಞಿ ಅಹಮ್ಮದ್ ಅವರ ಸಹಾಯದಿಂದ ರೇಶನ್ ಕಾರ್ಡ್ ಹಾಗೂ ಇತರೆ ಸೌಲಭ್ಯಗಳನ್ನು ದೊರಕಿಸಿ ಕೊಡಲಾಗಿತ್ತು. ಭಾನುವಾರ ಮಧುಕಿರಣ್ ಅನ್ನಪೂರ್ಣ ಎಲೆಕ್ಟ್ರಿಕಲ್, ವೆಂಕಟ್ರಮಣ ಗೌಡ ಪರಿವಾರಕಾನ , ರವಿಕುಮಾರ್ ಕುರುಂಜಿ ಇವರೆಲ್ಲರ ಸಹಕಾರದೊಂದಿಗೆ ಯುವ ಬ್ರಿಗೇಡ್ ತಂಡವು ಉಚಿತವಾಗಿ ವಿದ್ಯುತ್ ವಯರಿಂಗ್ ವ್ಯವಸ್ಥೆ ಮಾಡಿತು.ಈಗ ಬೆಳಕು ಹರಿದಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…