ಮಂಗಳೂರು : ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಚುಟುಕು ಸಂಕಲನ-2020 ಬಿಡುಗಡೆ ಕಾರ್ಯಕ್ರಮ ವಾರ್ತಾ ಇಲಾಖೆ ಸಭಾಂಗಣದಲ್ಲಿ ನಡೆಯಿತು.
ಚುಟುಕಿನ 55 ಕವಿಗಳು ಪುಸ್ತಕ ಬಿಡುಗಡೆಗೊಳಿಸಿದ ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಷಾ, ಕನ್ನಡ ಸಾಹಿತ್ಯ ಲೋಕದಲ್ಲಿ ಚುಟುಕು ಸಾಹಿತ್ಯದ ಕೊಡುಗೆ ಅಪಾರ. ಬಿಡುಗಡೆಗೊಂಡ ಚುಟುಕು ಸಂಕಲನವು ಚುಟುಕಿನ ಜೊತೆಗೆ ಕವಿಗಳನ್ನು ಪರಿಚಯಿಸುತ್ತಿರುವುದು ವಿಶೇಷ. ಈ ಮೂಲಕ ಚುಟುಕು ಹಾಗೂ ಕವಿಗಳ ದಾಖಲೀಕರಣವಾಗುತ್ತದೆ. ಇದು ಇತಿಹಾಸದ ಭಾಗವಾಗಿ ಭವಿಷ್ಯದಲ್ಲಿ ಅಧ್ಯಯನಕ್ಕೆ ಪೂರಕವಾಗುತ್ತದೆ ಎಂದರು.
ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ ಮಾತನಾಡಿ, ಮಹಾಭಾರತದಲ್ಲಿ ಕರ್ಣ, ರಾಷ್ಟ್ರಕವಿ ಕುವೆಂಪು, ಸೇರಿದಂತೆ ಯಕ್ಷಗಾನದಲ್ಲಿಯೂ ಕೂಡ ಚುಟುಕು ಸಾಹಿತ್ಯವನ್ನು ಅರಿತುಕೊಳ್ಳಬಹುದು. ಚುಟುಕು ರಚನೆಗೆ ಭಾಷಾಪ್ರಭುತ್ವತೆ, ಚಾತುರ್ಯ, ಜೊತೆಗೆ ನೋವು ನಲಿವು ಬೆಸೆಯುವ ಅಂಶ ಒಳಗೊಂಡಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರೇಮಂಡ್ ಡಿಕುನಾ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ವಿಜಯಲಕ್ಷ್ಮಿ, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಸುರೇಶ್ ನೆಗಳಗುಳಿ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…