ಮಂಗಳೂರು : ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಚುಟುಕು ಸಂಕಲನ-2020 ಬಿಡುಗಡೆ ಕಾರ್ಯಕ್ರಮ ವಾರ್ತಾ ಇಲಾಖೆ ಸಭಾಂಗಣದಲ್ಲಿ ನಡೆಯಿತು.
ಚುಟುಕಿನ 55 ಕವಿಗಳು ಪುಸ್ತಕ ಬಿಡುಗಡೆಗೊಳಿಸಿದ ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಷಾ, ಕನ್ನಡ ಸಾಹಿತ್ಯ ಲೋಕದಲ್ಲಿ ಚುಟುಕು ಸಾಹಿತ್ಯದ ಕೊಡುಗೆ ಅಪಾರ. ಬಿಡುಗಡೆಗೊಂಡ ಚುಟುಕು ಸಂಕಲನವು ಚುಟುಕಿನ ಜೊತೆಗೆ ಕವಿಗಳನ್ನು ಪರಿಚಯಿಸುತ್ತಿರುವುದು ವಿಶೇಷ. ಈ ಮೂಲಕ ಚುಟುಕು ಹಾಗೂ ಕವಿಗಳ ದಾಖಲೀಕರಣವಾಗುತ್ತದೆ. ಇದು ಇತಿಹಾಸದ ಭಾಗವಾಗಿ ಭವಿಷ್ಯದಲ್ಲಿ ಅಧ್ಯಯನಕ್ಕೆ ಪೂರಕವಾಗುತ್ತದೆ ಎಂದರು.
ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ ಮಾತನಾಡಿ, ಮಹಾಭಾರತದಲ್ಲಿ ಕರ್ಣ, ರಾಷ್ಟ್ರಕವಿ ಕುವೆಂಪು, ಸೇರಿದಂತೆ ಯಕ್ಷಗಾನದಲ್ಲಿಯೂ ಕೂಡ ಚುಟುಕು ಸಾಹಿತ್ಯವನ್ನು ಅರಿತುಕೊಳ್ಳಬಹುದು. ಚುಟುಕು ರಚನೆಗೆ ಭಾಷಾಪ್ರಭುತ್ವತೆ, ಚಾತುರ್ಯ, ಜೊತೆಗೆ ನೋವು ನಲಿವು ಬೆಸೆಯುವ ಅಂಶ ಒಳಗೊಂಡಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರೇಮಂಡ್ ಡಿಕುನಾ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ವಿಜಯಲಕ್ಷ್ಮಿ, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಸುರೇಶ್ ನೆಗಳಗುಳಿ ಮತ್ತಿತರರು ಉಪಸ್ಥಿತರಿದ್ದರು.
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…
ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು…
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…