ಮಂಗಳೂರು : ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಚುಟುಕು ಸಂಕಲನ-2020 ಬಿಡುಗಡೆ ಕಾರ್ಯಕ್ರಮ ವಾರ್ತಾ ಇಲಾಖೆ ಸಭಾಂಗಣದಲ್ಲಿ ನಡೆಯಿತು.
ಚುಟುಕಿನ 55 ಕವಿಗಳು ಪುಸ್ತಕ ಬಿಡುಗಡೆಗೊಳಿಸಿದ ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಷಾ, ಕನ್ನಡ ಸಾಹಿತ್ಯ ಲೋಕದಲ್ಲಿ ಚುಟುಕು ಸಾಹಿತ್ಯದ ಕೊಡುಗೆ ಅಪಾರ. ಬಿಡುಗಡೆಗೊಂಡ ಚುಟುಕು ಸಂಕಲನವು ಚುಟುಕಿನ ಜೊತೆಗೆ ಕವಿಗಳನ್ನು ಪರಿಚಯಿಸುತ್ತಿರುವುದು ವಿಶೇಷ. ಈ ಮೂಲಕ ಚುಟುಕು ಹಾಗೂ ಕವಿಗಳ ದಾಖಲೀಕರಣವಾಗುತ್ತದೆ. ಇದು ಇತಿಹಾಸದ ಭಾಗವಾಗಿ ಭವಿಷ್ಯದಲ್ಲಿ ಅಧ್ಯಯನಕ್ಕೆ ಪೂರಕವಾಗುತ್ತದೆ ಎಂದರು.
ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ ಮಾತನಾಡಿ, ಮಹಾಭಾರತದಲ್ಲಿ ಕರ್ಣ, ರಾಷ್ಟ್ರಕವಿ ಕುವೆಂಪು, ಸೇರಿದಂತೆ ಯಕ್ಷಗಾನದಲ್ಲಿಯೂ ಕೂಡ ಚುಟುಕು ಸಾಹಿತ್ಯವನ್ನು ಅರಿತುಕೊಳ್ಳಬಹುದು. ಚುಟುಕು ರಚನೆಗೆ ಭಾಷಾಪ್ರಭುತ್ವತೆ, ಚಾತುರ್ಯ, ಜೊತೆಗೆ ನೋವು ನಲಿವು ಬೆಸೆಯುವ ಅಂಶ ಒಳಗೊಂಡಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರೇಮಂಡ್ ಡಿಕುನಾ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ವಿಜಯಲಕ್ಷ್ಮಿ, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಸುರೇಶ್ ನೆಗಳಗುಳಿ ಮತ್ತಿತರರು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…