ಮಂಗಳೂರು : ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಚುಟುಕು ಸಂಕಲನ-2020 ಬಿಡುಗಡೆ ಕಾರ್ಯಕ್ರಮ ವಾರ್ತಾ ಇಲಾಖೆ ಸಭಾಂಗಣದಲ್ಲಿ ನಡೆಯಿತು.
ಚುಟುಕಿನ 55 ಕವಿಗಳು ಪುಸ್ತಕ ಬಿಡುಗಡೆಗೊಳಿಸಿದ ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಷಾ, ಕನ್ನಡ ಸಾಹಿತ್ಯ ಲೋಕದಲ್ಲಿ ಚುಟುಕು ಸಾಹಿತ್ಯದ ಕೊಡುಗೆ ಅಪಾರ. ಬಿಡುಗಡೆಗೊಂಡ ಚುಟುಕು ಸಂಕಲನವು ಚುಟುಕಿನ ಜೊತೆಗೆ ಕವಿಗಳನ್ನು ಪರಿಚಯಿಸುತ್ತಿರುವುದು ವಿಶೇಷ. ಈ ಮೂಲಕ ಚುಟುಕು ಹಾಗೂ ಕವಿಗಳ ದಾಖಲೀಕರಣವಾಗುತ್ತದೆ. ಇದು ಇತಿಹಾಸದ ಭಾಗವಾಗಿ ಭವಿಷ್ಯದಲ್ಲಿ ಅಧ್ಯಯನಕ್ಕೆ ಪೂರಕವಾಗುತ್ತದೆ ಎಂದರು.
ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ ಮಾತನಾಡಿ, ಮಹಾಭಾರತದಲ್ಲಿ ಕರ್ಣ, ರಾಷ್ಟ್ರಕವಿ ಕುವೆಂಪು, ಸೇರಿದಂತೆ ಯಕ್ಷಗಾನದಲ್ಲಿಯೂ ಕೂಡ ಚುಟುಕು ಸಾಹಿತ್ಯವನ್ನು ಅರಿತುಕೊಳ್ಳಬಹುದು. ಚುಟುಕು ರಚನೆಗೆ ಭಾಷಾಪ್ರಭುತ್ವತೆ, ಚಾತುರ್ಯ, ಜೊತೆಗೆ ನೋವು ನಲಿವು ಬೆಸೆಯುವ ಅಂಶ ಒಳಗೊಂಡಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರೇಮಂಡ್ ಡಿಕುನಾ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ವಿಜಯಲಕ್ಷ್ಮಿ, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಸುರೇಶ್ ನೆಗಳಗುಳಿ ಮತ್ತಿತರರು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…