ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜಿನಾಮೆಯನ್ನು ಹಿಂಪಡೆಯುವುದಿಲ್ಲ. ರಾಜಿನಾಮೆಯನ್ನು ಅಂಗೀಕರಿಸಿ ಬ್ಲಾಕ್ ಗೆ ಹೊಸ ಅಧ್ಯಕ್ಷರನ್ನು ಕೂಡಲೇ ನೇಮಕ ಮಾಡಬೇಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ವಿದೇಶ ಪ್ರವಾಸ ಮಾಡುವ ಕಾರಣ ಮೂರು ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆಯನ್ನು ಜಿಲ್ಲಾಧ್ಯಕ್ಷರಿಗೆ ನೀಡಿದ್ದೆ. ಅಧ್ಯಕ್ಷ ಅವಧಿಯಲ್ಲಿ ಮೂರು ಚುನಾವಣೆಯನ್ನು ಎದುರಿಸಿದ್ದೆ. ಉತ್ತಮ ಕೆಲಸ ಮಾಡಿದ್ದರೂ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದೇ ಇದ್ದುದು ಕೂಡ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಕಾರಣವಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲು ಆಸಕ್ತಿ ಇಲ್ಲ. ಆದರೆ ಹೊಸ ಅಧ್ಯಕ್ಷರ ನೇಮಕ ಆಗುವ ತನಕ ಅಧ್ಯಕ್ಷರ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ಕೂಡಲೇ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದಲ್ಲಿ ಪಕ್ಷದ ಪುನಃ ಸಂಘಟನೆ ಸದ್ಯದಲ್ಲಿಯೇ ನಡೆಯಲಿದೆ. ಆ ಸಂದರ್ಭದಲ್ಲಿ ಸುಳ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಬ್ಲಾಕ್, ಜಿಲ್ಲಾ ಅಧ್ಯಕ್ಷರ ನೇಮಕ ನಡೆಯಲಿದೆ. ಬ್ಲಾಕ್ ಅಧ್ಯಕ್ಷತೆ ಹೊರತುಪಡಿಸಿ ಪಕ್ಷ ನೀಡುವ ಯಾವುದೇ ಹುದ್ದೆಯನ್ನೂ ನಿಭಾಯಿಸಲು ಸಿದ್ಧ ಎಂದು ಅವರು ಹೇಳಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…