ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜಿನಾಮೆಯನ್ನು ಹಿಂಪಡೆಯುವುದಿಲ್ಲ. ರಾಜಿನಾಮೆಯನ್ನು ಅಂಗೀಕರಿಸಿ ಬ್ಲಾಕ್ ಗೆ ಹೊಸ ಅಧ್ಯಕ್ಷರನ್ನು ಕೂಡಲೇ ನೇಮಕ ಮಾಡಬೇಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ವಿದೇಶ ಪ್ರವಾಸ ಮಾಡುವ ಕಾರಣ ಮೂರು ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆಯನ್ನು ಜಿಲ್ಲಾಧ್ಯಕ್ಷರಿಗೆ ನೀಡಿದ್ದೆ. ಅಧ್ಯಕ್ಷ ಅವಧಿಯಲ್ಲಿ ಮೂರು ಚುನಾವಣೆಯನ್ನು ಎದುರಿಸಿದ್ದೆ. ಉತ್ತಮ ಕೆಲಸ ಮಾಡಿದ್ದರೂ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದೇ ಇದ್ದುದು ಕೂಡ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಕಾರಣವಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲು ಆಸಕ್ತಿ ಇಲ್ಲ. ಆದರೆ ಹೊಸ ಅಧ್ಯಕ್ಷರ ನೇಮಕ ಆಗುವ ತನಕ ಅಧ್ಯಕ್ಷರ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ಕೂಡಲೇ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದಲ್ಲಿ ಪಕ್ಷದ ಪುನಃ ಸಂಘಟನೆ ಸದ್ಯದಲ್ಲಿಯೇ ನಡೆಯಲಿದೆ. ಆ ಸಂದರ್ಭದಲ್ಲಿ ಸುಳ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಬ್ಲಾಕ್, ಜಿಲ್ಲಾ ಅಧ್ಯಕ್ಷರ ನೇಮಕ ನಡೆಯಲಿದೆ. ಬ್ಲಾಕ್ ಅಧ್ಯಕ್ಷತೆ ಹೊರತುಪಡಿಸಿ ಪಕ್ಷ ನೀಡುವ ಯಾವುದೇ ಹುದ್ದೆಯನ್ನೂ ನಿಭಾಯಿಸಲು ಸಿದ್ಧ ಎಂದು ಅವರು ಹೇಳಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…