ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜಿನಾಮೆಯನ್ನು ಹಿಂಪಡೆಯುವುದಿಲ್ಲ. ರಾಜಿನಾಮೆಯನ್ನು ಅಂಗೀಕರಿಸಿ ಬ್ಲಾಕ್ ಗೆ ಹೊಸ ಅಧ್ಯಕ್ಷರನ್ನು ಕೂಡಲೇ ನೇಮಕ ಮಾಡಬೇಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ವಿದೇಶ ಪ್ರವಾಸ ಮಾಡುವ ಕಾರಣ ಮೂರು ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆಯನ್ನು ಜಿಲ್ಲಾಧ್ಯಕ್ಷರಿಗೆ ನೀಡಿದ್ದೆ. ಅಧ್ಯಕ್ಷ ಅವಧಿಯಲ್ಲಿ ಮೂರು ಚುನಾವಣೆಯನ್ನು ಎದುರಿಸಿದ್ದೆ. ಉತ್ತಮ ಕೆಲಸ ಮಾಡಿದ್ದರೂ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದೇ ಇದ್ದುದು ಕೂಡ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಕಾರಣವಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲು ಆಸಕ್ತಿ ಇಲ್ಲ. ಆದರೆ ಹೊಸ ಅಧ್ಯಕ್ಷರ ನೇಮಕ ಆಗುವ ತನಕ ಅಧ್ಯಕ್ಷರ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ಕೂಡಲೇ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದಲ್ಲಿ ಪಕ್ಷದ ಪುನಃ ಸಂಘಟನೆ ಸದ್ಯದಲ್ಲಿಯೇ ನಡೆಯಲಿದೆ. ಆ ಸಂದರ್ಭದಲ್ಲಿ ಸುಳ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಬ್ಲಾಕ್, ಜಿಲ್ಲಾ ಅಧ್ಯಕ್ಷರ ನೇಮಕ ನಡೆಯಲಿದೆ. ಬ್ಲಾಕ್ ಅಧ್ಯಕ್ಷತೆ ಹೊರತುಪಡಿಸಿ ಪಕ್ಷ ನೀಡುವ ಯಾವುದೇ ಹುದ್ದೆಯನ್ನೂ ನಿಭಾಯಿಸಲು ಸಿದ್ಧ ಎಂದು ಅವರು ಹೇಳಿದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…