ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜಿನಾಮೆಯನ್ನು ಹಿಂಪಡೆಯುವುದಿಲ್ಲ. ರಾಜಿನಾಮೆಯನ್ನು ಅಂಗೀಕರಿಸಿ ಬ್ಲಾಕ್ ಗೆ ಹೊಸ ಅಧ್ಯಕ್ಷರನ್ನು ಕೂಡಲೇ ನೇಮಕ ಮಾಡಬೇಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ವಿದೇಶ ಪ್ರವಾಸ ಮಾಡುವ ಕಾರಣ ಮೂರು ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆಯನ್ನು ಜಿಲ್ಲಾಧ್ಯಕ್ಷರಿಗೆ ನೀಡಿದ್ದೆ. ಅಧ್ಯಕ್ಷ ಅವಧಿಯಲ್ಲಿ ಮೂರು ಚುನಾವಣೆಯನ್ನು ಎದುರಿಸಿದ್ದೆ. ಉತ್ತಮ ಕೆಲಸ ಮಾಡಿದ್ದರೂ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದೇ ಇದ್ದುದು ಕೂಡ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಕಾರಣವಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲು ಆಸಕ್ತಿ ಇಲ್ಲ. ಆದರೆ ಹೊಸ ಅಧ್ಯಕ್ಷರ ನೇಮಕ ಆಗುವ ತನಕ ಅಧ್ಯಕ್ಷರ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ಕೂಡಲೇ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದಲ್ಲಿ ಪಕ್ಷದ ಪುನಃ ಸಂಘಟನೆ ಸದ್ಯದಲ್ಲಿಯೇ ನಡೆಯಲಿದೆ. ಆ ಸಂದರ್ಭದಲ್ಲಿ ಸುಳ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಬ್ಲಾಕ್, ಜಿಲ್ಲಾ ಅಧ್ಯಕ್ಷರ ನೇಮಕ ನಡೆಯಲಿದೆ. ಬ್ಲಾಕ್ ಅಧ್ಯಕ್ಷತೆ ಹೊರತುಪಡಿಸಿ ಪಕ್ಷ ನೀಡುವ ಯಾವುದೇ ಹುದ್ದೆಯನ್ನೂ ನಿಭಾಯಿಸಲು ಸಿದ್ಧ ಎಂದು ಅವರು ಹೇಳಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…