ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜಿನಾಮೆಯನ್ನು ಹಿಂಪಡೆಯುವುದಿಲ್ಲ. ರಾಜಿನಾಮೆಯನ್ನು ಅಂಗೀಕರಿಸಿ ಬ್ಲಾಕ್ ಗೆ ಹೊಸ ಅಧ್ಯಕ್ಷರನ್ನು ಕೂಡಲೇ ನೇಮಕ ಮಾಡಬೇಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ವಿದೇಶ ಪ್ರವಾಸ ಮಾಡುವ ಕಾರಣ ಮೂರು ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆಯನ್ನು ಜಿಲ್ಲಾಧ್ಯಕ್ಷರಿಗೆ ನೀಡಿದ್ದೆ. ಅಧ್ಯಕ್ಷ ಅವಧಿಯಲ್ಲಿ ಮೂರು ಚುನಾವಣೆಯನ್ನು ಎದುರಿಸಿದ್ದೆ. ಉತ್ತಮ ಕೆಲಸ ಮಾಡಿದ್ದರೂ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದೇ ಇದ್ದುದು ಕೂಡ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಕಾರಣವಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲು ಆಸಕ್ತಿ ಇಲ್ಲ. ಆದರೆ ಹೊಸ ಅಧ್ಯಕ್ಷರ ನೇಮಕ ಆಗುವ ತನಕ ಅಧ್ಯಕ್ಷರ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ಕೂಡಲೇ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದಲ್ಲಿ ಪಕ್ಷದ ಪುನಃ ಸಂಘಟನೆ ಸದ್ಯದಲ್ಲಿಯೇ ನಡೆಯಲಿದೆ. ಆ ಸಂದರ್ಭದಲ್ಲಿ ಸುಳ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಬ್ಲಾಕ್, ಜಿಲ್ಲಾ ಅಧ್ಯಕ್ಷರ ನೇಮಕ ನಡೆಯಲಿದೆ. ಬ್ಲಾಕ್ ಅಧ್ಯಕ್ಷತೆ ಹೊರತುಪಡಿಸಿ ಪಕ್ಷ ನೀಡುವ ಯಾವುದೇ ಹುದ್ದೆಯನ್ನೂ ನಿಭಾಯಿಸಲು ಸಿದ್ಧ ಎಂದು ಅವರು ಹೇಳಿದರು.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…