Advertisement
ಧಾರ್ಮಿಕ

ಚೂಂತಾರಿನಲ್ಲಿ ಗುರುಕುಲ ಪದ್ಧತಿಯ ಧಾರ್ಮಿಕ ಶಿಕ್ಷಣ

Share

ಬೆಳ್ಳಾರೆ: ಮಕ್ಕಳ ಬೇಸಿಗೆ ರಜೆಯಲ್ಲಿ  ಒಂದು ತಿಂಗಳ ಕಾಲ ಗುರುಕುಲ ಪದ್ಧತಿ ಶೈಲಿಯಲ್ಲಿ ಧಾರ್ಮಿಕ ಶಿಕ್ಷಣ, ವೇದಾಭ್ಯಾಸ ಹಾಗು ಮಕ್ಕಳ ಭವಿಷ್ಯಕ್ಕೆ ಪೂರಕವಾಗುವಂತಹ ಕಲೆಗಾರಿಕೆಯನ್ನು ಬೆಳ್ಳಾರೆ ಬಳಿಯ ಚೂಂತಾರಿನಲ್ಲಿ  ವೇದನಿಲಯದಲ್ಲಿ  ಸದ್ದಿಲ್ಲದೆ ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿದೆ.

Advertisement

ಬೆಳ್ಳಾರೆ ಸಮೀಪದ ಅಪರಪಡ್ನೂರು ಗ್ರಾಮ ಚೂಂತಾರು ವೇದನಿಲಯದಲ್ಲಿ
ಚೂಂತಾರಿನ ದಿ| ಕೃಷ್ಣ ಭಟ್ ಪ್ರತಿಷ್ಠಾನದ ಆಶ್ರಯದಲ್ಲಿ ಕಾರ್ಯದರ್ಶಿ ವೇ|ಮೂ ಶಿವಪ್ರಸಾದ್ ಭಟ್ ಚೂಂತಾರು ಮುಂದಾಳತ್ವದಲ್ಲಿ ನಡೆಯುತ್ತಿರುವ ವೇದ, ಯೋಗ ಕಲಾ ಶಿಬಿರಕ್ಕೆ ಈಗ ದಶಮಾನೋತ್ಸವ ಕಳೆದು ಒಂದು ವರ್ಷ. ನಿತ್ಯ ನಿರಂತರ ವೇದದೊಂದಿಗೆ  ಆಧ್ಯಾತ್ಮ ಹಾಗು ಮಾನವೀಯ ಮೌಲ್ಯಗಳನ್ನು ಬಿತ್ತುತ್ತಿರುವ ಈ ವೇದ ಶಿಬಿರವು ಕಳೆದ 11 ವರ್ಷಗಳಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ  ಸಂಸ್ಕಾರ ನೀಡಿದೆ.  10 ವರ್ಷಗಳ ಹಿಂದಿನ ಬೇಸಿಗೆ ರಜೆಯಲ್ಲಿ 10 ವಿದ್ಯಾರ್ಥಿಗಳೊಂದಿಗೆ ಪ್ರಾರಂಭವಾಗಿದ್ದ ಶಿಬಿರವಿಂದು ಅನೇಕ ಮಕ್ಕಳಿಗೆ ಶಿಕ್ಷಣ ನೀಡಿದೆ.
ಇಲ್ಲಿ ಮಕ್ಕಳಿಗೆ  ಕೇವಲ ವೇದಾಧ್ಯನಕ್ಕೆ ಸೀಮಿತವಾಗಿರಿಸದೆ ಇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳುವಂತೆ ಪ್ರತಿಷ್ಠಾನವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಮಕ್ಕಳಿಗೆ ನಿತ್ಯ ಪಂಚಾಂಗವನ್ನು ಅಧ್ಯಯಿಸಲು ತರಬೇತಿ ನೀಡುತ್ತದೆ. ಭಜನೆ ತರಬೇತಿ, ಮಕ್ಕಳಿಗೆ ಎಳವೆಯಲ್ಲಿಯೇ ಸಭಾಕಂಪನವನ್ನು ಹೋಗಲಾಡಿಸುವ ಸಲುವಾಗಿ ಭಾಷಣ ಕಲೆಯನ್ನು, ಸಾಂಸ್ಕಂತಿಕವಾಗಿ ತರಬೇತಿಗಳನ್ನು ಪ್ರತಿಷ್ಠಾನ ನೀಡುತ್ತಿದೆ. ಬಿಡುವಿನ ವೇಳೆಯಲ್ಲಿ ನುರಿತ ಯೋಗ ಪಂಡಿತರಿಂದ ಯೋಗ, ಮುದ್ರೆಗಳು, ವರ್ಣಚಿಕಿತ್ಸೆ ಕಲೆಗಾರಿಕೆಯನ್ನು ಕಲಿಸಿಕೊಡಲಾಗುತ್ತಿದೆ. ಶಿಬಿರದಲ್ಲಿ ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನೂ ಏರ್ಪಡಿಸಿ, ಶಿಬಿರಾರ್ಥಿಗಳನ್ನು ಇನ್ನಷ್ಟೂ ಕಲಿಕೆಯಡೆಗೆ ಉತ್ಸಾಹಿಗಳಾಗುವಂತೆ ಮಾಡುತ್ತಿರುತ್ತದೆ.

ಶಿಬಿರಕ್ಕೆ ಪ್ರತೀ ವರ್ಷ ಊರಿನ ಸಮಸ್ತರು ತರಕಾರಿಗಳನ್ನು, ಸಿಹಿ ತಿಂಡಿಗಳನ್ನು , ಅಡುಗೆ ಸಾಮಾಗ್ರಿಗಳನ್ನು ದಾನವಾಗಿ ನೀಡುತ್ತಿದ್ದಾರೆ.

“ಸುಳ್ಯಸುದ್ದಿ.ಕಾಂ” ಜೊತೆ ಮಾತನಾಡಿದ ಪ್ರತಿಷ್ಠಾನದ ಪ್ರಧಾನ ಅಧ್ಯಾಪಕ ಹಾಗೂ ಕಾರ್ಯದರ್ಶಿ ವೇ| ಮೂ ಶಿವಪ್ರಸಾದ ಭಟ್,” ಮುಂದಿನ ಪೀಳಿಗೆ ದೇಶದ ಹಾಗು ದಾರ್ಮಿಕ ಸಂಸ್ಕಂತಿಯನ್ನು ಮರೆಯಬಾರದು.ವೇದವು ಮನುಷ್ಯರ ಹೃದಯ ಶುದ್ಧಗೊಳಿಸುತ್ತದೆ. ವೇದವೇ ತಮ್ಮ ಅಸ್ಥಿತ್ವಕ್ಕೆ ಸೂತ್ರ ಎಂಬುದನ್ನು ಅರಿತುಕೊಳ್ಳಲು ವೇದ ಶಿಬಿರವು ಮಕ್ಕಳಿಗೆ ತೀರಾ ಅಗತ್ಯ” ಎನ್ನುತ್ತಾರೆ.

ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ “ಸುಳ್ಯಸುದ್ದಿ.ಕಾಂ” ಜೊತೆ ಮಾತನಾಡುತ್ತಾ, “ವೇದ ಶಿಬಿರವು ಭಾರತದ ಭಾವಿ ಸತ್ಪ್ರಜೆಗಳನ್ನು ರೂಪಿಸುತ್ತದೆ.ನಮ್ಮ ನಮ್ಮ ಸಮಾಜದ ಭದ್ರತೆಗೆ ವೇದವೂ ಉತ್ತಮವಾದ ಅಡಿಪಾಯವನ್ನು ನಿರ್ಮಿಸುತ್ತದೆ.” ಎನ್ನುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

6 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

12 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

16 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

17 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

17 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago