Advertisement
ಧಾರ್ಮಿಕ

ಚೂಂತಾರಿನಲ್ಲಿ ಗುರುಕುಲ ಪದ್ಧತಿಯ ಧಾರ್ಮಿಕ ಶಿಕ್ಷಣ

Share

ಬೆಳ್ಳಾರೆ: ಮಕ್ಕಳ ಬೇಸಿಗೆ ರಜೆಯಲ್ಲಿ  ಒಂದು ತಿಂಗಳ ಕಾಲ ಗುರುಕುಲ ಪದ್ಧತಿ ಶೈಲಿಯಲ್ಲಿ ಧಾರ್ಮಿಕ ಶಿಕ್ಷಣ, ವೇದಾಭ್ಯಾಸ ಹಾಗು ಮಕ್ಕಳ ಭವಿಷ್ಯಕ್ಕೆ ಪೂರಕವಾಗುವಂತಹ ಕಲೆಗಾರಿಕೆಯನ್ನು ಬೆಳ್ಳಾರೆ ಬಳಿಯ ಚೂಂತಾರಿನಲ್ಲಿ  ವೇದನಿಲಯದಲ್ಲಿ  ಸದ್ದಿಲ್ಲದೆ ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿದೆ.

ಬೆಳ್ಳಾರೆ ಸಮೀಪದ ಅಪರಪಡ್ನೂರು ಗ್ರಾಮ ಚೂಂತಾರು ವೇದನಿಲಯದಲ್ಲಿ
ಚೂಂತಾರಿನ ದಿ| ಕೃಷ್ಣ ಭಟ್ ಪ್ರತಿಷ್ಠಾನದ ಆಶ್ರಯದಲ್ಲಿ ಕಾರ್ಯದರ್ಶಿ ವೇ|ಮೂ ಶಿವಪ್ರಸಾದ್ ಭಟ್ ಚೂಂತಾರು ಮುಂದಾಳತ್ವದಲ್ಲಿ ನಡೆಯುತ್ತಿರುವ ವೇದ, ಯೋಗ ಕಲಾ ಶಿಬಿರಕ್ಕೆ ಈಗ ದಶಮಾನೋತ್ಸವ ಕಳೆದು ಒಂದು ವರ್ಷ. ನಿತ್ಯ ನಿರಂತರ ವೇದದೊಂದಿಗೆ  ಆಧ್ಯಾತ್ಮ ಹಾಗು ಮಾನವೀಯ ಮೌಲ್ಯಗಳನ್ನು ಬಿತ್ತುತ್ತಿರುವ ಈ ವೇದ ಶಿಬಿರವು ಕಳೆದ 11 ವರ್ಷಗಳಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ  ಸಂಸ್ಕಾರ ನೀಡಿದೆ.  10 ವರ್ಷಗಳ ಹಿಂದಿನ ಬೇಸಿಗೆ ರಜೆಯಲ್ಲಿ 10 ವಿದ್ಯಾರ್ಥಿಗಳೊಂದಿಗೆ ಪ್ರಾರಂಭವಾಗಿದ್ದ ಶಿಬಿರವಿಂದು ಅನೇಕ ಮಕ್ಕಳಿಗೆ ಶಿಕ್ಷಣ ನೀಡಿದೆ.
ಇಲ್ಲಿ ಮಕ್ಕಳಿಗೆ  ಕೇವಲ ವೇದಾಧ್ಯನಕ್ಕೆ ಸೀಮಿತವಾಗಿರಿಸದೆ ಇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳುವಂತೆ ಪ್ರತಿಷ್ಠಾನವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಮಕ್ಕಳಿಗೆ ನಿತ್ಯ ಪಂಚಾಂಗವನ್ನು ಅಧ್ಯಯಿಸಲು ತರಬೇತಿ ನೀಡುತ್ತದೆ. ಭಜನೆ ತರಬೇತಿ, ಮಕ್ಕಳಿಗೆ ಎಳವೆಯಲ್ಲಿಯೇ ಸಭಾಕಂಪನವನ್ನು ಹೋಗಲಾಡಿಸುವ ಸಲುವಾಗಿ ಭಾಷಣ ಕಲೆಯನ್ನು, ಸಾಂಸ್ಕಂತಿಕವಾಗಿ ತರಬೇತಿಗಳನ್ನು ಪ್ರತಿಷ್ಠಾನ ನೀಡುತ್ತಿದೆ. ಬಿಡುವಿನ ವೇಳೆಯಲ್ಲಿ ನುರಿತ ಯೋಗ ಪಂಡಿತರಿಂದ ಯೋಗ, ಮುದ್ರೆಗಳು, ವರ್ಣಚಿಕಿತ್ಸೆ ಕಲೆಗಾರಿಕೆಯನ್ನು ಕಲಿಸಿಕೊಡಲಾಗುತ್ತಿದೆ. ಶಿಬಿರದಲ್ಲಿ ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನೂ ಏರ್ಪಡಿಸಿ, ಶಿಬಿರಾರ್ಥಿಗಳನ್ನು ಇನ್ನಷ್ಟೂ ಕಲಿಕೆಯಡೆಗೆ ಉತ್ಸಾಹಿಗಳಾಗುವಂತೆ ಮಾಡುತ್ತಿರುತ್ತದೆ.

ಶಿಬಿರಕ್ಕೆ ಪ್ರತೀ ವರ್ಷ ಊರಿನ ಸಮಸ್ತರು ತರಕಾರಿಗಳನ್ನು, ಸಿಹಿ ತಿಂಡಿಗಳನ್ನು , ಅಡುಗೆ ಸಾಮಾಗ್ರಿಗಳನ್ನು ದಾನವಾಗಿ ನೀಡುತ್ತಿದ್ದಾರೆ.

“ಸುಳ್ಯಸುದ್ದಿ.ಕಾಂ” ಜೊತೆ ಮಾತನಾಡಿದ ಪ್ರತಿಷ್ಠಾನದ ಪ್ರಧಾನ ಅಧ್ಯಾಪಕ ಹಾಗೂ ಕಾರ್ಯದರ್ಶಿ ವೇ| ಮೂ ಶಿವಪ್ರಸಾದ ಭಟ್,” ಮುಂದಿನ ಪೀಳಿಗೆ ದೇಶದ ಹಾಗು ದಾರ್ಮಿಕ ಸಂಸ್ಕಂತಿಯನ್ನು ಮರೆಯಬಾರದು.ವೇದವು ಮನುಷ್ಯರ ಹೃದಯ ಶುದ್ಧಗೊಳಿಸುತ್ತದೆ. ವೇದವೇ ತಮ್ಮ ಅಸ್ಥಿತ್ವಕ್ಕೆ ಸೂತ್ರ ಎಂಬುದನ್ನು ಅರಿತುಕೊಳ್ಳಲು ವೇದ ಶಿಬಿರವು ಮಕ್ಕಳಿಗೆ ತೀರಾ ಅಗತ್ಯ” ಎನ್ನುತ್ತಾರೆ.

ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ “ಸುಳ್ಯಸುದ್ದಿ.ಕಾಂ” ಜೊತೆ ಮಾತನಾಡುತ್ತಾ, “ವೇದ ಶಿಬಿರವು ಭಾರತದ ಭಾವಿ ಸತ್ಪ್ರಜೆಗಳನ್ನು ರೂಪಿಸುತ್ತದೆ.ನಮ್ಮ ನಮ್ಮ ಸಮಾಜದ ಭದ್ರತೆಗೆ ವೇದವೂ ಉತ್ತಮವಾದ ಅಡಿಪಾಯವನ್ನು ನಿರ್ಮಿಸುತ್ತದೆ.” ಎನ್ನುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

6 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

1 day ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

1 day ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

3 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago