ಚೆಂಬು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬು ಶಾಲೆಯಲ್ಲಿ ಗುರುವಾರ ಪೌಷ್ಟಿಕಾಂಶಯುಕ್ತ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಪ್ರಜ್ಞೆ ಕುರಿತು ಮಾಹಿತಿ ನೀಡಲಾಯಿತು.
ಶಾಲಾ ಪರಿಸರದಲ್ಲಿ ಪೌಷ್ಟಿಕಾಂಶಯುಕ್ತ ಹಣ್ಣುಗಳು ದೊರಕುವಂತೆ ಮತ್ತು ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಮಡಿಕೇರಿ ತೋಟಗಾರಿಕಾ ಇಲಾಖೆ ತಾಲೂಕು ಪಂಚಾಯತ್ ಅನುದಾನದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ವಿತರಿಸಲು ಮುಂದಾಗಿದೆ. ಅದರಂತೆಯೇ ಮಡಿಕೇರಿ ತಾಲೂಕು, ಸಂಪಾಜೆ ಕ್ಲಸ್ಟರ್ ವ್ಯಾಪ್ತಿಯ ಸ.ಹಿ.ಪ್ರಾ.ಶಾಲೆ ಊರುಬೈಲು ಚೆಂಬುವಿನಲ್ಲಿ ತೋಟಗಾರಿಕಾ ಇಲಾಖಾ ವತಿಯಿಂದ ನೀಡಲ್ಪಟ್ಟಿದ್ದ ಗಿಡಗಳನ್ನು ನೆಟ್ಟು ” ನಮ್ಮ ಪರಿಸರ ” ಎಂಬ ಶಾಲಾ ಯೋಜನೆಯಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಶಾಲಾ ವಿದ್ಯಾರ್ಥಿಗಳು ಪರಿಸರ ಪ್ರಪಂಧ, ಚರ್ಚಾ ಸ್ಪರ್ಧೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕಾರ್ಯಕ್ರಮಕ್ಕೆ ಮೆರಗು ತಂದುಕೊಂಡರು . ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…