ಸವಣೂರು: ಪಾಲ್ತಾಡಿ ಗ್ರಾಮದ ಚೆನ್ನಾವರ ಸ.ಕಿ.ಪ್ರಾ.ಶಾಲೆಯಲ್ಲಿ ಅಭ್ಯುದಯ ಯುವಕ ಮಂಡಲ ಚೆನ್ನಾವರ, ನೆಹರು ಯುವ ಕೇಂದ್ರ ಮಂಗಳೂರು ಇದರ ಸಹಯೋಗದಲ್ಲಿ ಗಾಂಧೀ ಜಯಂತಿ, ಸ್ವಚ್ಚತೆಯ ಕುರಿತು ಉಪನ್ಯಾಸ ನಡೆಯಿತು.
ಚೆನ್ನಾವರ ಶಾಲಾ ಮುಖ್ಯಶಿಕ್ಷಕಿ ಶಾಂತಾ ಕುಮಾರಿ ಎನ್ ಅವರು ಸ್ವಚ್ಚತೆಯ ಕುರಿತು ಮಾತನಾಡಿ ನಮ್ಮ ದೇಶ ಪ್ಲಾಸ್ಟಿಕ್ ಮುಕ್ತವಾದಾಗ ಆರೋಗ್ಯಪೂರ್ಣ ವಾತಾವರಣ ನಿರ್ಮಾಣವಾಗಬಹುದು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು ಪ್ರಸ್ತುತ ಅನಿವಾರ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಪುಟ್ಟಣ್ಣ ನಾಯ್ಕ ವಹಿಸಿದ್ದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶೀಲಾವತಿ ಧರ್ಮಪಾಲ, ಸದಸ್ಯೆ ಚಂದ್ರಿಕಾ ಜಗದೀಶ್ ,ಯುವಕ ಮಂಡಲದ ಸದಸ್ಯ ಚರಣ್ ರೈ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಗಾಂಧೀ ಸ್ಮೃತಿ, ಭಾಷಣ ನಡೆಯಿತು. ಶಿಕ್ಷಕಿ ಶ್ವೇತಾ ಸ್ವಾಗತಿಸಿ ವಂದಿಸಿದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…